ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿನಿಗೆ ಸನ್ಮಾನ

ಹೊನ್ನಾವರ: ಪಟ್ಟಣದ ಮಹಾಗಣಪತಿ ಕರಾಟೆ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಶ್ರೀಶಾ ಜಯಂತ ಹರಿಕಂತ್ರ ಇವಳು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 98.56% ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ಇದನ್ನು ಮನಗಂಡು ಕರಾಟೆ ಶಾಲೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಕರಾಟೆ ಶಾಲೆಯ ತಾಲೂಕ ಅಧ್ಯಕ್ಷ ಪ್ರಭಾಕರ ಗೌಡ, ಜಿಲ್ಲಾ ಉಪಾಧ್ಯಕ್ಷ ಶಂಕರ ಮೇಸ್ತ, ರಾಮ ಶೇಟ್, ಕರಾಟೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.