ಕಾರವಾರ : ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬಸ್ ಗಳಲ್ಲಿ ಶೇ. ೫೦ ರಷ್ಟು ಪ್ರಯಾಣಿಕರಿಗೆ ಮಾತ್ರ ಅನುಮತಿ ನೀಡಲಾಗಿತ್ತು.
ಸರ್ಕಾರದ ಈಗ ಬಸ್ಗಳಲ್ಲಿ ಶೇ. ೧೦೦ರಷ್ಟು ಪ್ರಯಾಣಿಕರಿಗೆ ಪ್ರಯಾಣಿಸಲು ಅನುಮತಿ ನೀಡಿದೆ. ಎಂದು ವಾ.ಕ.ರಾ.ರ.ಸಾ ಸಂಸ್ಥಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ ಗದಗ, ಹಾವೇರಿ, ಉತ್ತರಕನ್ನಡ, ಬಾಗಲಕೋಟ, ಬೆಳಗಾವಿ, ಮತ್ತು ಚಿಕ್ಕೋಡಿ ವಿಭಾಗಗಳ ವ್ಯಾಪ್ತಿಯ ಘಟಕಗಳಿಂದ ಕೆಲವು ಅಂತರ್ರಾಜ್ಯ ಸಾರಿಗೆಗಳನ್ನು ಹೊರತೆಪಡಿಸಿ ಇನ್ನುಳಿದ ಎಲ್ಲ ಪ್ರತಿಷ್ಟಿತ ಸಾರಿಗೆಗಳನ್ನು ಪುನಃ ಪ್ರಾಂರಭಿಸಲಾಗಿದೆ.
ಚಾಲನಾ ಸಿಬ್ಬಂದಿಗಳು ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಮಸ್ಕ್ ಸುರಕ್ಷತಾ ಕ್ರಮಗಳೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಯಾಣಿಸಬೇಕು. ಪ್ರಯಾಣಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.
Leave a Comment