ಯಲ್ಲಾಪುರ : ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ರಾ.ಹೆ63ರ ಬಿಸಗೋಡ್ ಕ್ರಾಸ್ ಬಳಿ ಸಂಭವಿಸಿದೆ.
ತಾಲೂಕಿನ ಅರಬೈಲ್ ಜನತಾ ಕಲೋನಿ ನಿವಾಸಿ ರವಿ (27) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ರಸ್ತೆಯ ಪಕ್ಕ ನಡೆದುಕೊಂಡು ಹೋಗುವಾಗ ಕಲಘಟಗಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಬಸ್ ಚಾಲಕ ಆನಂದ ನಾಯ್ಕ ನಿಷ್ಕಾಳಜಿತನದಿಂದ ಅವಘಾತ ಪಡಿಸಿದ್ದಾನೆ.
ಎಂದು ಪೊಲೀಸ್ ಠಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Leave a Comment