ಬೆಂಗಳೂರು : ಕೃಷಿ ವಿವಿಗಳಲ್ಲಿ ಖಾಲಿ ಇರುವ ಶೇ.50 ರಷ್ಟು ಹುದ್ದೆಗಳನ್ನು ಭರ್ತಿ ಮಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಹೀಗಾಗಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಶೀಘ್ರವೇ ನೇಮಕಾತಿ ಪ್ರಕ್ರಿಯೆ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ವಿಧಾಮ ಪರಿಷತ್ನಲ್ಲಿ ಸದಸ್ಯರಾದ ಅರವಿಂದಕುಮಾರ್ ಅರಳಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಜಿಲ್ಲೆಗೆ ಒಂದು ಕೃಷಿ ಕಾಲೇಜು ಇರಬೇಂಕೆದು ನಿಯಮವಿದೆ. ಆರ್ಥಿಕ ಪರಿಸ್ಥಿತಿ ಆಧರಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುವುದು ಎಂದು ಭರವಸೆ ನೀಡಿದರು.
ಎಲ್ಲವೂ ಒಂದೇ ಕಡೆ ಇದ್ದರೆ ರೈತರಿಗೆ ಅನುಕೂಲವಾಗುತ್ತದೆ. ಕೃಷಿ ವಿವಿ ಸ್ಥಾಪಿಸಬೇಕದರೆ ಕನಿಷ್ಠ 75 ಎಕರೆ ಬೂಮಿ ಬೇಕು. ಭೂಮಿ ಲಭ್ಯ ಇರುವ ಕಡೆ ಕೃಷಿ ವಿವಿಗಳನ್ನು ವಿಲೀನಗೊಳಿಸಲು ಇರುವ ಕಾಲೇಜು ಮತ್ತು ವಿವಿಗಳಲ್ಲಿ ಭೋಧಕರ ಕೊರತೆ ಇದೆ. ಹೆಚ್ಚುಗಾರಿಕೆ ಜಿಲ್ಲೆಗೊಂದು ಕಾಲೇಜು ಸ್ಥಾಪಿಸಿ ಕಾಟಾಚಾರಕ್ಕೆ ಶೈಕ್ಷಣಿಕ ಸಂಸ್ಥೆ ನಡೆಸಲು ಸರ್ಕಾರಕ್ಕೆ ಇಷ್ಟ ಇಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಕೃಪಿ ತೋಟಗಾರಿಕೆ ವಿವಿ ಸೇರತಿದಂತೆ ಕೃಷಿಗೆ ಸಂಬAಧಪಟ್ಟ ವಿವಿಗಳು ಒಂದೇ ಕಡೆ ಇರುವಂತೆ ಕ್ರಮ ಕೈಗೊಳ್ಳಬೇಕು. ಎಂದು ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದಾಗ, ಬಿಸಲಯ್ಯ ಅವರ ಸಮಿತಿ ಕೂಡ ಇದೇ ರೀತಿ ಶಿಪಾರಸು ಮಾಡಿದೆ.
ಇತ್ತಿಚಿಗೆ ರಾಜ್ಯಕ್ಕೆ ಬೇಟಿ ನೀಡಿದ ಕೃಷಿ ರಾಜ್ಯ ಸಚಿವ ಶೋಭಾ ಕರಂದ್ಲಾಜೆ ಇವರೊಂದಿಗೆ ಚರ್ಚೆ ಮಡಿದ್ದೇವೆ. ಕೃಷಿ ತೋಟಗಾರಿಕೆ ವಿಶ್ವವಿದ್ಯಾಲಯಗಳನ್ನು ವಿಲೀನಗೊಳಿಸುವುದು ಅಥವ ಒಂದೇ ಕಡೆ ಸ್ಥಾಪಿಸುವ ಬಗ್ಗೆ ಸಮಾಲೋಚನೆ ಮಡಲಾಗುವುದು ಎಂದರು.
Leave a Comment