ಭಟ್ಕಳ: ಎ.ಟಿಎಮ್ ನಲಿ ಸಿಕ್ಕ ಹಣವನ್ನು ಮಾಲೀಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರದ ಯುವಕನಿಗೆಜಿಲ್ಲಾ ಹೆಚ್ಚುವರಿ ಪೊಲೀಸವರಿಷ್ಠಧಿಕಾರಿ ಬದ್ರಿನಾಥರವರಿಂದ ಶನಿವಾರ ರಾತ್ರಿ ನಗರ ಠಾಣೆಯಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ .
ಕಳೆದ ಆಗಸ್ಟ್ 31 ರಂದು ತಾಲೂಕಿನ ಬಂದರು ರಸ್ತೆಯಲ್ಲಿನ ಎಟಿಎಂಗೆ ಬಿಲಾಲ್ ತನ್ವಿರ್ ಎಂಬಾತ ತನ್ನ ತಂದೆಯ ಖಾತೆಗೆ 1,74,000 ರೂ. ಜಮಾ ಮಾಡಿ ತೆರಳಿದ್ದರು.
ಆದರೆ ಎಟಿಎಂನಲ್ಲಿನ ತಾಂತ್ರಿಕ ತೊಡಕಿನಿಂದ ಹಣ ವಾಪಸ್ ಬಂದಿತ್ತು. ಇದು ತನ್ವಿರ್ ಅರಿವಿಗೆ ಬಂದಿರಲಿಲ್ಲ. ಬಳಿಕ ಬೆಳಕೆಯ ದಿನಕರ ಗೊಂಡ ಎಂಬಾತ ಇದೇ ಎಟಿಎಂಗೆ ತೆರಳಿದ್ದಾನೆ. ಆಗ ವಾಪಸ್ ಬಂದಿದ್ದ ಹಣವನ್ನು ಕಂಡು, ನಗರ ಠಾಣೆಗೆ ಬಂದು ಪೊಲೀಸರ ವಶಕ್ಕೆ ನೀಡಿ ಘಟನೆ ಬಗ್ಗೆ ತಿಳಿಸಿದ್ದಾನೆ.

ತಕ್ಷಣಕ್ಕೆ ಎಟಿಎಂ ಬಳಿ ತೆರಳಿದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ, ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿಯನ್ನು ವಿಚಾರಿಸಿದ್ದಾರೆ. ಆಗ ಹಣವು ಬಿಲಾಲ್ ತನ್ವಿರ್ ತಂದೆಯ ಖಾತೆಗೆ ಜಮಾ ಆಗದಿರುವುದು ತಿಳಿದುಬಂದಿದೆ. ಈ ಬಗ್ಗೆ ಖಾತ್ರಿಪಡಿಸಿಕೊಂಡು 1,74,000 ರೂ.ಗಳನ್ನು ಬಿಲಾಲ್ಗೆ ಹಸ್ತಾಂತರಿಸಿದ ಘಟನೆ ಎಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
ಯುವಕನ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶನಿವಾರ ಭಟ್ಕಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯುವಕನನ್ನು ಭಟ್ಕಳ ನಗರ ಠಾಣೆಗೆ ಕರೆದು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ
ಈ ಸಂದರ್ಭದಲ್ಲಿ ಡಿವೈಎಸ್ ಪಿ ಕೆ ಯು ಬೆಳ್ಳಿಯಪ್ಪ, ನಗರ ಠಾಣೆಯ ಪಿಎಸ್ ಐಗಳಾದ ಸುಮಾ ಬಿ ಹಾಗೂ ಹನುಮಂತಪ್ಪ ಕುಡಗುಂಟಿ ಉಪಸ್ಥಿತರಿದ್ದರು.
Leave a Comment