• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗಾಂಧಿನಗರದಲ್ಲಿ ಅಂಗಡಿ ಚಾವಣಿ ರಿಪೇರಿಗೆ ಅರಣ್ಯ ಅಧಿಕಾರಿಗಳಿಂದ ತಡೆ ಆರೋಪ; ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ

September 28, 2021 by bkl news Leave a Comment

ಭಟ್ಕಳ:ತಾಲೂಕಿನ ಗಾಂಧಿನಗರ  ಗ್ರಾಮದ ನಿವಾಸಿಯೋರ್ವರು ತಮ್ಮ ಅಂಗಡಿಯ ರಿಪೇರಿ ಮಾಡುವ ವೇಳೆ ಸ್ಥಳಕ್ಕೆ ಬಂದ ಅರಣ್ಯ ಇಲಾಖಾಧಿಕಾರಿಗಳು ತಡೆಯೊಡ್ಡಿದ ಕಾರಣ ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮಂಗಳವಾರ ನಡೆದಿದೆ. 


  ಗಾಂಧಿನಗರ ಸ್ಥಳೀಯ ನಿವಾಸಿ ಶನಿಯಾರ ನಾಯ್ಕ ಎಂಬವರು ಕಳೆದ 35 ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಾ ಬಂದಿದ್ದು, ಅವರ ಸಾವಿನ ಬಳಿಕ ಈ ಅಂಗಡಿ ಅವರ ಪತ್ನಿಯ ಹೆಸರಿನಲ್ಲಿತ್ತು. ಹಲವು ದಿನಗಳಿಂದ ಮುಚ್ಚಿದ್ದ ಅಂಗಡಿಯ ಮೇಲ್ಛಾವಣಿ ರಿಪೇರಿಗೆಂದು ಮಂಗಳವಾರ  ಶೀಟು ಹಾಕಲು ಅಂಗಡಿ ಮಾಲಕರು ಮುಂದಾಗಿದ್ದಾರೆ.

  • IMG 20210928 WA0119

ಈ ವೇಳೆ ಯಾರೋ ಕೊಟ್ಟ ಮಾಹಿತಿ ಆಧಾರದಲ್ಲಿ ಸ್ಥಳಕ್ಕೆ ಆಗಮಿಸಿದ ಭಟ್ಕಳ ವಲಯ ಆರ್‌ಎಫ್‌ಒ ಹಾಗೂ ಸಿಬ್ಬಂದಿ, ಅಂಗಡಿ ಜಾಗ ಅರಣ್ಯ ಭೂಮಿಗೆ ಸೇರಿದ್ದು ಎಂದು ಹೇಳಿ ಅಂಗಡಿಗೆ ಹಾಕಲಾಗಿದ್ದ ಶೀಟನಿ ತೆರವಿಗೆ ಮುಂದಾಗಿದ್ದು ಅರಣ್ಯ ಅಧಿಕಾರಿಗಳು ನಡೆಸುತ್ತಿದ್ದ ಕೆಲಸವನ್ನು ವಿಡಿಯೋ ಮಾಡುತ್ತಿದ್ದ ಸ್ಥಳೀಯರಿಗೆ ಏಕವಚನದಿಂದ ದಭಾಯಿಸಿದ್ದಲ್ಲದೇ, ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ವಾಗ್ವಾದಕ್ಕಿಳಿದಿದ್ದಾರೆ.

ಸ್ಥಳೀಯರು ಈ ಬಗ್ಗೆ ದೂರು ನೀಡೋದಾಗಿ ಹೇಳಿದಾಗ ಏನ್ ಮಾಡ್ಕೋತ್ತೀರಾ ಮಾಡ್ಕೊಳ್ಳಿ ಹೋಗಿ ಎಂದು ಅಧಿಕಾರಿ ಆವಾಜ್ ಹಾಕಿದ್ದಾರೆ. ಘಟನೆಯ ಮಾಹಿತಿ ಪಡೆದು ದಿ. ಶನಿಯಾರ ನಾಯ್ಕ ಅವರ ಪತ್ನಿ ಅಸ್ವಸ್ಥಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ  ಹರಿದಾಡುತ್ತಿದ್ದು, ಅಧಿಕಾರಿಗಳು ದರ್ಪ ತೋರಿಸುತ್ತಿದ್ದಾರೆಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: ಅಧಿಕಾರಿಗಳ ನಡುವೆ ಮಾತಿನ ಚಕಮಕಿ, ಅರಣ್ಯ ಅಧಿಕಾರಿಗಳು, ಅರಣ್ಯ ಭೂಮಿಗೆ ಸೇರಿದ್ದು, ಗಾಂಧಿನಗರ ಸ್ಥಳೀಯ ನಿವಾಸಿ, ಶೀಟನಿ ತೆರವಿಗೆ ಮುಂದಾಗಿದ್ದು

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...