ಭಟ್ಕಳ : ತಾಲೂಕಿನ ರೈಲ್ವೇ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆಯ ಪೊಲೀಸರಿಂದ ಕಾರ್ಯಚರಣೆ ನಡೆಸಿ ಬಂಧಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಬಂಧಿತ ಆರೋಪಿ ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಎಂದು ತಿಳಿದು ಬಂದಿದ್ದು
ಆರೋಪಿಗಳು ಮಂಗಳವಾರ ರಾತ್ರಿ ಭಟ್ಕಳ ರೈಲ್ವೇ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 560 ಗ್ರಾಂ ತೂಕದ ಗಾಂಜಾವನ್ನು ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಮಾದಕ ವಸ್ತುವಾದ ಗಾಂಜಾವನ್ನು ತಮ್ಮ ವಶದಲ್ಲಿ ಇಟ್ಟುಕೊಂಡು ಮಾರಾಟ ಮಾಡುತ್ತಿದವರನ್ನು ಬಂಧಿಸಿದ್ದಾರೆ .
ಆರೋಪಿಗಳಿಂದ ಒಟ್ಟು 560 ಗ್ರಾಂ ಗಾಂಜಾ, ವಶಪಡಿಸಿಕೊಂದಿದ್ದಾರೆ.
ಈ ಕುರಿತುಭ ಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment