ಮಂಗಳೂರು : ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ, ಕಾಸರಗೋಡಿನ ತೂಂಬುAಗಲ್ ಅರಿಂಬಾ ಕಡುಮೇನಿ ನೀವಾಸಿ ನೀನಾ ಸತೀಶ್ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸ್ಟೆಲ್ ಸಿಬ್ಬಂದಿ ಕಿರುಕುಳ ಆರೋಪ ಕಾಲೇಜಿನ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ ನೀನಾ, ಮಂಗಳವಾರ ಸಾಯಂಕಾಲ ಬಾತ್ರೂಮ್ನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ವಿಷಯ ತಿಳಿದ ಸಿಬ್ಬಂದಿ ಕೂಡಲೇ ಆಕೆಯನ್ನು ನೇಣು ಕುಣಿಕೆಯಿಂದ ಹೊರಕ್ಕೆ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಬುಧುವಾರ ಬೆಳ್ಳಿಗೆ ಮೃತಪಟ್ಟಿದ್ದಾರೆ. ಹಾಸ್ಟೆಲ್ ಸಿಬ್ಬಂದಿಯ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜತೆ ಮೊಬೈಲ್ನಲ್ಲಿ ಮಾತನಾಡಲು ಅವಕಾಶ ಇರಲಿಲ್ಲ ಎನ್ನಲಾಗಿದೆ.
Leave a Comment