ಬೆಂಗಳೂರು: ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಸಿದೆ.
ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್, ಆಧಾರ್ ಗುರುತಿನ ಚೀಟಿ ನೋಂದಣಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆಗೆ ಒದಗುವ ಅಪಾಯ ಎಂದು ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ಇಂತಹ ಕೃತ್ಯಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಜಾಗ್ರತೆ ವಹಿಸಬೇಕು
ಎಂದು ಎಚ್ಚರಿಸಿದೆ.ಆಧಾರ್ ಕಿಟ್ಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬAಧಿಸಿದAತೆ ಜೆ.ಪಿ. ನಗರದ ಮೆಸರ್ಸ್ ಎಡುರೇಸ್ ಕಂಪನಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತ ಸಮಗ್ರ ತನಿಖೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಸ್ತು ಎಂದಿದೆ.
ಈ ಸಂಬAಧ 2017ರಲ್ಲಿ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿದೆ.ಕಿಟ್ಗಳಿಗೆ 40 ಸಾವಿರದಿಂದ 2 ಲಕ್ಷ ರೂವರೆಗೆ ಪಡೆಯಲಾಗಿದೆ ಮತ್ತು ಪ್ರತಿ ಆಧಾರ್ ಕಾರ್ಡ್ಗೆ 100ರಿಂದ 200 ರೂ ಪಡೆಯಲಾಗಿದೆ ಎಂಬ ಆರೋಪವಿದೆ.
ಆಧಾರ್ ಪ್ರಾಧಿಕಾರದ ಅಧಿಕಾರಿಗಳೇ ಈ ಬಗ್ಗೆ ಪರಿಶೀಲನೆ ನಡೆಸಿ, ದೂರು ದಾಖಲಿಸಿದ್ದಾರೆ. ಆದ್ದರಿಂದ, ಅರ್ಜಿದಾರರು ಈ ಪ್ರಕರಣದಲ್ಲಿ ನಿರಪರಾಧಿ ಎಂದು ಸಾಬೀತುಪಡಿಸಲು ವಿಚಾರಣಾ ನ್ಯಾಯಾಲಯದ ವಿಚಾರಣೆ ಎದುರಿಸಲೇಬೇಕಿದೆ ಎಂದು ಆದೇಶಿಸಿದೆ.ಆದ್ದರಿಂದ, ಹೊರಡಿಸಲಾದ ನೋಟಿಸ್ ಮತ್ತು ಸಂಗ್ರಹಿಸಲಾಗಿರುವ ಹಣ
ಸಮರ್ಥನೆ ಕುರಿತಾಗಿ ಅರ್ಜಿದಾರರು ತಪ್ಪಿಲ್ಲದೆ ಹೊರಬರುವುದು ವಿಚಾರಣೆಯ ವಿಷಯವಾಗಿದೆ. ಆದಾರ್ ಕಿಟ್ ಮಾರಾಟ ಮಾಡಲು ಐದು ಆಯ್ಕೆಗಳ ಅಡಿಯಲ್ಲಿ ಸಂಗ್ರಹಿಸಲಾಗಿರುವ ಹಣ ರೂ. 40,000 ದಿಂದ 1,85,000 ವರೆಗೆ ಇದ್ದು ನಮ್ಮ ಕೇಂದ್ರದಲ್ಲಿ ಆಧಾರ್ ನೋಂದಣಿಗಾಗಿ ಪಡೆಯುವ ಹಣ ರೂ. 100 ರಿಂದ ರೂ. 200 ವರೆಗೆ ಇರುತ್ತದೆ. ಎಂದು ಅಭಿಪ್ರಾಯಪಟ್ಟಿತು.
ಕೇಂದ್ರ ಸರ್ಕಾರ ಪರ ವಾದ ಮಂಡಿಸಿದ್ದ ಸಹಾಯಕ ಸಾಲಿಸಿಟರ್ ಜನರಲ್ ಶಾಂತಿಭೂಷಣ್ ಮತ್ತು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಜಿ.ನಮಿತಾ ಕಲ್ಲೇಶ್, ಈ ಪ್ರಕರಣದಲ್ಲಿ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ ಅಧಿಕಾರಿಗಳು ನಮ್ಮ ಕೇಂದ್ರಕ್ಕೆ ನಾಗರಿಕರ ಸೋಗಿನಲ್ಲಿ ಭೇಟಿ ನೀಡಿ, ಪರೀಶೀಲಿಸಿದಾಗ ಅಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದುದು ಬೆಳಕಿನ ಬಂದಿದೆ ಎಂಬ ಅಂಶವನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.
ಈ ಪ್ರಕರಣದಲ್ಲಿ ನೆರೆ ರಾಷ್ಟçಗಳ ಪ್ರಜೆಗಳಿಗೂ ಮನಬಂದAತೆ ಆಧಾರ್ ಕಾರ್ಡ್ಗಳನ್ನು ವಿತರಿಸಲಾಗಿದೆ. ಆದ್ದರಿಂದ ಅರ್ಜಿದಾರರ ವಿರುದ್ದದ ಆರೋಪದಗಳ ಕುರಿತು ಅಮಗ್ರ ವಿಚಾರಣೆ ನಡೆಯಬೇಕಿದ್ದು, ಎಫ್ ಐ ಆರ್ ರದ್ದುಪಡಿಸದೆ ತನಿಖೆ ನಡೆಯಲು ಆದೇಶಿಸಬೇಕು ಎಂದು ಕೋರಿದ್ದರು.
Leave a Comment