ಕಾರವಾರ : ನಗರದ ಕಾಜುಬಾಗದ ದುರ್ಗಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೇಣಿಗೆ ಶರಣಾದ ಘಟನೆ ನಡೆದಿದೆ. ಮೂಲತಃ ವಿಜಯಪುರ ನಿವಾಸಿಯಾದ ಸುದೀಪ ಬೋರಯ್ಯ (18) ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತನು ಕಾಜುಭಾಗದ ದುರ್ಗಾಬೇಕರಿಯ ಸಮೀಪ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಾಡಿಗೆ ಮನೆಯಲ್ಲಿ ಐವರು ಸೇಹಿತರಿದ್ದು, ಅವರೆಲ್ಲ ಮಲಗಿರುವ ಸಮಯದಲ್ಲಿ ಕೇಬಲ್ ಬಳಸಿ ಮೇಲ್ಫಾವಣಿಗೆ ನೇಣು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳ್ಳಿಗೆ ಎದ್ದ ಸ್ನೇಹಿತರು ಗಾಬರಿಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ನಗರ ಠಾಣೆ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಮಾತ್ರ ತಿಳಿದುಬಂದಿಲ್ಲ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Leave a Comment