ಹೊನ್ನಾವರ : ತಾಲೂಕಿನ ಹಳದೀಪುರದ ನವಿಲಗೋಣ ಕ್ರಾಸ್ ಬಳಿ ರಾಷ್ಟಿçÃಯ ಹೆದ್ದಾರಿ (66) ಯಲ್ಲಿ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವಗೀಡಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಸAಕೊಳ್ಳಿಯ ಗಣಪತಿ ಅನಂತ ನಾಯ್ಕ (77) ಮೃತಪಟ್ಟವ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನುಜ್ಜುಗುಚ್ಚಾಗಿದೆ. ಬೈಕ್ ಸವಾರ ರಾಷ್ಟಿçÃಯ ಹೆದ್ದಾರಿಯಿಂದ ಒಳ ರಸ್ತೆಗೆ ಹೊರಳುವ ಯತ್ನದಲ್ಲಿದ್ದಾಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಬಸ್ ನೊಂದಿಗೆ ಡಿಕ್ಕಿಯಾಗಿದೆ.
ಗಂಭಿರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯವ ಪ್ರಯತ್ನಮಡಿದರು. ಆದರೆ ಮಾರ್ಗ ಮಧ್ಯೆ ಮೃತಪಟ್ಟ ಎಂದು ತಿಳಿದು ಬಂದಿದೆ.
Leave a Comment