ಯಲ್ಲಾಪುರ :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಾವಣಗೆರೆ ಇವರ ಆಶ್ರಯದಲ್ಲಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕಿರವತ್ತಿಯ ಉರ್ದು ಪ್ರೌಢಶಾಲೆ ಶಿಕ್ಷಕ ದಿವಾಕರ ಮರಾಠಿ 100 ಮೀಟರ್ ಓಟದಲ್ಲಿ ಬಂಗಾರದ ಪದಕ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ನಂತರ ನಡೆದ ಸಮಾರಂಭ ದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಯುವಜನ ಸೇವಾ ಕ್ರೀಡಾ ಸಚಿವ ನಾರಾಯಣ ಗೌಡ ಹಾಗೂ , ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎನ್ ಷಡಕ್ಷರಿ ಬಹುಮಾನ ವಿತರಿಸಿದರು.
Leave a Comment