ಹೊನ್ನಾವರ; ಸರ್ಕಾರಗಳು ಯಕ್ಷಗಾನ ನಾಟಕ, ಸಂಗೀತದಂತಹ ಕಾರ್ಯಕ್ರಮ ನಡೆಸಲು ಕೋವಿಡ್ ನೆಪವೊಡ್ಡಿ ಪ್ರದರ್ಶನಕ್ಕೆ ಅವಕಾಶ ನೀಡದೇ ಇರುವುದು ಖಂಡನಾರ್ಹ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಹೇಳಿದರು.
ಅವರು ಹೊನ್ನಾವರದಲ್ಲಿ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ ಕಳೆದ ಎರಡು ವರ್ಷದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೋವಿಡ್ ನೆಪವೊಡ್ಡಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿಲ್ಲ. ಕಲಾವಿದರು ಕಲೆಯನ್ನು ನಂಬಿ ಬದುಕುತ್ತಿದ್ದಾರೆ.
ಆದರೆ ಅಂತಹ ಕಲಾವಿದರಿಗೆ ಕಲೆಗೆ ಗೌರವ ನೀಡಬೇಕಾದರೆ, ಕಲೆ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಒಂದಡೆ ಚುನಾವಣೆ ನಡೆಸಲು ಅನುಮತಿ ನೀಡುವ ಸರ್ಕಾರ ಕಲೆ ಪ್ರದರ್ಶನಕ್ಕೆ ಅವಕಾಶ ನೀಡದೇ ಇರುವುದು ಬೇಸರದ ಸಂಗತಿಯಾಗಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡುವಂತೆ ಆಗ್ರಹಿಸಿದರು.
Leave a Comment