ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಸಿಡಿಸಿದ ಪಟಾಕಿಯಿಂದ ಈ ಬಾರಿ ೬೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಬಬ್ಬರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸೆಗೆ ಒಳಗಾಗಿರುವ ೫೫ ವರ್ಷದ ವ್ಯಕ್ತಿ ದೃಷ್ಟಿ ಕಳೆದುಕೊಂಡವರು.
ಈ ಬಾರಿ ೬೦ ಕ್ಕೂ ಹೆಚ್ಚು ಮಂದಿ ಗಾಯ ಮನೆಯ ಹೊರಗೆ ನೆರೆಹೊರೆ ಯವರು ಪಟಾಕಿ ಸಿಡಿಸುತ್ತಿದ್ದುದನ್ನು ನೋಡುತ್ತ ನಿಂತಿದ್ದ ಇವರ ಕಣ್ಣಿಗೆ ಪಟಾಕಿ ಕಿಡಿ ಹಾರಿ ಗಂಭೀರವಾಗಿ ಗಾಯಗೊಂಡಿದ್ದರು.
ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ೨೭ ಮಂದಿ ನಾರಾಯಣ ನೇತ್ರಾಲಯದಲ್ಲಿ ೩೫ ಮಂದಿ, ಅಗರ್ವಾಲ್ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆದುಕೊಂಡಿದ್ದಾರೆ.
Leave a Comment