ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಾಗರಕವಚ ಅಣಕು ಕಾರ್ಯಾಚರಣೆ ಇಂದಿನಿಂದ ಆರಂಭಗೊಂಡಿದೆ. ನಗರದ ಬೈತಖೋಲ್, ಜಿಲ್ಲಾಧಿಕಾರಿ ಕಚೇರಿ, ಕಾಳಿ ಸೇತುವೆ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ವಾಹನಗಳನ್ನು ತಡೆದು ಕಟ್ಟುನಿಟ್ಟಿನ ತಪಾಸಣೆಗಳನ್ನು ಕೈಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಣಕು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಸಮುದ್ರ, ರಸ್ತೆ ಮಾರ್ಗವಾಗಿ ಸಂಚರಿಸುವವರ ಮೇಲೆ ನಿಗಾ ಇಡಲಾಗಿದೆ. ಜನರಲ್ಲಿ ಭದ್ರತೆಯ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆಯಿಂದ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.