ಕಾಲೇಜು ಯುವತಿಯ ರಕ್ಷಣೆ ! ಇನ್ನಿಬ್ಬರಿಗಾಗಿ ಪೊಲೀಸರಿಂದ ತೀವ್ರ ಶೋಧ
ಶಿರಸಿ : ತಾಲೂಕಿನ ಟಿಪ್ಪು ನಗರ ಕ್ರಾಸ್ ಬಳಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿದ ಪ್ರಕರಣ ಛೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬAಧಿಸಿದAತೆ ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಯುವತಿಯ ರಕ್ಷಣೆ ಮಾಡಲಾಗಿದೆ.
ತಾಲೂಕಿನ ಕಾಳಂಗಿಯ ಹೊನ್ನಪ್ಪ ಪುಟ್ಟಪ್ಪ ದ್ಯಾಮನಕೊಪ್ಪ ಬಂಧಿತ ಆರೋಪಿ ಈತನು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಣ ಮಾಡಿ ಬೆಂಗಳೂರಿನಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟು ನಂತರ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ, ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಈತನನ್ನು ಪತ್ತೆ ಹಚ್ಚಿ ಬಂಧಿಸಿದರು.
ಇತರೆ ಆರೋಪಿಗಳಾದ ಕಾಳಂಗಿಯ ಬಸವರಾಜ್ ಮತ್ತು ಹುಲ್ಲಪ್ಪ ತಲೆಮರೆಸಿಕೊಂಡಿದ್ದ ತನಿಖೆ ನಡೆಸಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಹೊನ್ನಪ್ಪನು ವಿದ್ಯಾರ್ಥಿನಿಯನ್ನು ಮದುವೆಯಾಗುವ ಉದ್ದೇಶದಿಂದ ಬಲವಂತವಾಗಿ ಕಿಡ್ನಾಪ್ ಮಾಡಿರುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ. 15 ರಂದು ರಾಯಪ್ಪ ಹುಲೇಕಲ್ ಕಾಲೇಜ್ ಕ್ರಾಸ್ ಹತ್ತಿರ, ಶಿರಸಿ – ಬನವಾಸಿ ರಸ್ತೆಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ತನ್ನ ಮಗಳನ್ನು ಯಾರೋ ಒಂದು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದರೆಂದು ತಾಯಿ ನೀಡಿದ ದೂರನ್ನು ಸವಾಲಗಿ ಸ್ವೀಕರಿಸಿದ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರ ತಂಡ ತನಿಖೆಗಿಳಿದು ಪ್ರಕರಣ ಛೇದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ಕುರಿತ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment