ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಕಳೆದ ಎರಡು ದಿನಗಳಿಂದ ಮರೆಯಾಗಿದ್ದ ಮಳೆ ಮತ್ತೆ ಕಾಣಿಸಿಕೊಳ್ಳಿಲಿದೆ. ಶುಕ್ರವಾರ ಬೆಳಗಿನ ಜಾವ ತಮಿಳನಾಡಿಗೆ ಚಂಡಮಾರುತ ಅಪ್ಪಳಿಸಿದ್ದ ಇದರ ಪರಿಣಾಮ ರಾಜ್ಯದ ದಕ್ಷಿಣ ಭಾಗಕ್ಕೆ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಮಂಡ್ಯ್, ಮೈಸೂರು, ಚಾಮರಾಜ ನಗರ, ಕೊಡಗು, ಕೋಲಾರ ಚಿಕ್ಕಬಳ್ಳಾಪುರ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳನಾಡಿನ ಕರಾವಳಿಗೆ ಚಂಡಮಾರುತ ಅಪ್ಪಳಿಸಿದ ನಂತರ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಕಂಡುಬAದಿದೆ. ಇನ್ನು ಮೂರು ದಿನಗಳ ಕಾಲ ಕೆಲವಡೆ ಭಾರೀ ಮಳೆಯಾಲಿರುವ ದರಿಂದ ಎಲ್ಲ ಕಡೆ ಕಟ್ಟೆಚ್ಚರ ವಹಿಸುವಂತೆ ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಇಂದು ವೇಳೆ ಮಳೆ ಹೆಚ್ಚಾದಲ್ಲಿ ತಗ್ಗು ಪ್ರದೇಶದಲ್ಲಿ ಇರುವ ಹಾಗೂ ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡು ವಂತೆಯೂ ಸೂಚಿಸಲಾಗಿದೆ.
ಹಾಗೆಯೇ ಅನಾಹುತಗಳನ್ನು ತಡೆಗಟ್ಟಲು ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ತಂಡಗಳನ್ನು ಸಜ್ಜಾಗಿಡುವಂತೆ ಸೂಚನೆ ನೀಡಲಾಗಿದೆ.
Leave a Comment