ಯಲ್ಲಾಪುರ :
ಬೆಂಗಳೂರಿನ ರಾಜಾಜಿನಗರ ಇಎಸ್ಐ ಶವಾಗಾರದಲ್ಲಿ ನಡೆದ ಘಟನೆ ಕುರಿತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದು, ಈ ಆಸ್ಪತ್ರೆ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆ. ಆದರೂ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರ ಹಾಗೂ ಕಲ್ಬುರ್ಗಿಯ ಇಎಸ್ಐ ಆಸ್ಪತ್ರೆಗಳು ನನ್ನ ವ್ಯಾಪ್ತಿಗೆ ಬರುವುದಿಲ್ಲ
ಇವು ಕೇಂದ್ರ ಸರ್ಕಾರದ ನೇರ ನಿಯಂತ್ರಣ ಹೊಂದಿವೆ
ಇವೆರೆಡನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಆಸ್ಪತ್ರೆಯೂ ನನ್ನ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆಯ (ಇಎಸ್ಐ) ಶೈತ್ಯಾಗಾರದಲ್ಲಿ 15 ತಿಂಗಳುಗಳವರೆಗೆ ಎರಡು ಮೃತದೇಹಗಳನ್ನು ಹಾಗೆಯೇ ಇಟ್ಟು, ನಾಲ್ಕು ದಿನಗಳ ಹಿಂದೆ ಆ ಶವಗಳನ್ನು ಹೊರ ತೆಗೆದಿರುವ ಘಟನೆ ನಡೆದಿದೆ. ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದು, ಮೃತರ ಕುಟುಂಬದವರು ಕೂಡ ಶವಗಳನ್ನು ಸ್ವೀಕರಿಸಲು ಹಿಂದೇಟು ಹಾಕಿರುವ ಬಗ್ಗೆ ವರದಿಯಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಶಿವರಾಮ ಹೆಬ್ಬಾರ್, ಬೆಂಗಳೂರಿನ ರಾಜಾಜಿನಗರ ಹಾಗೂ ಕಲ್ಬುರ್ಗಿಯ ಇಎಸ್ಐ ಆಸ್ಪತ್ರೆಗಳು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಇವು ಕೇಂದ್ರ ಸರ್ಕಾರದ ನೇರ ನಿಯಂತ್ರಣ ಹೊಂದಿವೆ. ಇವೆರೆಡನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಆಸ್ಪತ್ರೆಯೂ ನನ್ನ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದ್ದಾರೆ
Leave a Comment