ಇಂದು(ಗುರುವಾರ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆಯ ಕುರಿತು ತಯಾರಿಸಿರುವ “ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿಗಳ” ಬಗ್ಗೆ ಕ್ಷೇತ್ರ ಮಟ್ಟದ ಬಾಗೀದಾರರಿಗೆ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಅವರು ಉದ್ಘಾಟಿಸಿದರು.

ಕಾರ್ಯಗಾರದಲ್ಲಿದ್ದ ವಿವಿಧ ಇಲಾಖೆಯ ಕ್ಷೇತ್ರ ಮಟ್ಟದ ಬಾಗೀದಾರರನ್ನು ಉದ್ದೇಶಿಸಿ ಮಾತನಾಡಿದ ಅವರು,
ನಮ್ಮ ಮನೆಯಲ್ಲಿರುವ ತಾಯಿ, ಸಹೋದರಿಯರು ಅನೈತಿಕ ಸಾಗಾಣಿಕೆಯಂತಹ ಘಟನೆಗಳಿಗೆ ಸಿಲುಕಿದಾಗ ಹೇಗೆಲ್ಲ ನಾವು ವರ್ತಿಸುತ್ತೇವೆ, ಶ್ರಮಿಸುತ್ತೆವೆ ಎಂಬುವುದನ್ನ ಅರಿತುಕೊಂಡು ಅದೇ ಮನಸ್ಥಿತಿಯಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು.
ಸಮಾಜದಲ್ಲಿ ಜನರ ಹಾಗೂ ಮಹಿಳೆಯರ ಅನೈತಿಕ ಸಾಗಾಣಿಕೆ ಘಟನೆಗಳಿಗಿಂತ ಮಕ್ಕಳ ಅನೈತಿಕ ಸಾಗಾಣಿಕೆ ಪ್ರಕರಣಗಳು ಹೆಚ್ಚಾಗಿವೆ. ಇವು ಕೋವಿಡ್-೧೯ ಸಂದರ್ಭದಲ್ಲಿ ಕಂಡುಬಂದಿದೆ. ಅತ್ಯಂತ ಬುದ್ದಿವಂತರು ಹಾಗೂ ಎಲ್ಲ ಕ್ಷೇತ್ರಗಳಲ್ಲು ಉನ್ನತ ಸಾಧನೆಗೈದಿದ್ದೇವೆ ಎಂಬ ಮನೋಭಾದ ಜಿಲ್ಲೆಯಾದ ಉತ್ತರ ಕನ್ನಡದಲ್ಲಿಯೂ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯಂತ ಘಟನೆಗಳು ನಡೆಯುತ್ತಿದ್ದು, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ನಿಯಂತ್ರಣ ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯದ್ದಲ್ಲ. ಕಂದಾಯ, ಪೊಲೀಸ್, ಗ್ರಾಮ ಪಂಚಾಯತಿ ಅಭಿವೃದ್ಧಿ ಇಲಾಖೆ ಸೇರಿದಂತೆ ಪ್ರತಿಯೊಬ್ಬರ ಮೇಲೆ ಈ ಜವಾಬ್ದಾರಿಯಿದೆ ಎಂದರು.

ಅನೈತಿಕ ಸಾಗಾಣಿಕೆ ತಡೆಗಟ್ಟಲು ಸಾಕಷ್ಟು ಕಾನೂನುಗಳಿದ್ದು, ಅವುಗಳ ಬಗ್ಗೆ ಜನರಿಗೆ ಅರಿವು ಮೂಡಿಸುವಂತ ಕಾರ್ಯವನ್ನ ಜವಾಬ್ದಾರಿಯುತ ಇಲಾಖೆಗಳ ಅಧಿಕಾರಿಗಳು ಮಾಡಬೇಕಿದೆ. ನಿಯಮಬದ್ದವಾಗಿ ಕಾಯ್ದೆ, ಕಾನೂನಿನ ಫಲ ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ ಹಾಗೂ ಸಾರ್ವಜನಿಕರಿಗೆ ತಲುಪುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಅನೈತಿಕ ಸಾಗಾಣಿಕೆಯಂತಹ ಘಟನೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ತೊಡೆದು ಹಾಕುವ ನಿಟ್ಟಿನಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೆಕರ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಹಾಗೂ ನಿಯಂತ್ರಕ್ಕಿರುವ ಕಾನೂನನ್ನ ಪ್ರತಿಯೊಬ್ಬರೂ ಸರಿಯಾಗಿ ತಿಳಿದುಕೊಳ್ಳಬೇಕು. ಈ ಅನೈತಿಕ ಸಾಗಾಣಿಕೆ ಕೇವಲ ಮಹಿಳೆಯರಿಗೆ ಸೀಮಿತವಲ್ಲ. ಮಕ್ಕಳು, ಪುರುಷರೂ ಇಕ್ಕೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಅನೈತಿಕ ಸಾಗಾಣಿಕೆಗೆ ಒಳಗಾದಂತ ಮಹಿಳೆ, ವ್ಯಕ್ತಿ, ಮಕ್ಕಳ ಬಳಿಗೆ ತೆರಳಿ ಸರಿಯಾಗಿ ಸ್ಪಂದಿಸುವ ಅಗತ್ಯವಿದೆ.
ಅನೈತಿಕ ಸಾಗಾಣಿಕೆ ತಡೆಯುವ ಜವಾಬ್ದಾರಿ ಕೇವಲ ಕಲೆವೇ ಇಲಾಖೆಗೆ ಸಂಬಂದಿಸಿಲ್ಲ. ಸಮಾಜದ ಪ್ರತಿಯೊಬ್ಬರಿಗೂ ಅನ್ವಹಿಸುತ್ತದೆ. ಆದ್ದರಿಂದ ಅನೈತಿಕ ಸಾಗಾಣಿಕೆಗೆ ಒಳಗಾಗಿ ಮಾನಸಿಕ ಒತ್ತಡಕ್ಕೆ ಒಳಗಾದವರಿಗೆ ಸಹಾಯ ಮಾಡುವ ಮನೋಭಾವದಿಂದ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ವಿಲಿಯಂ ಕ್ರಿಸ್ಟೋಫರ್ ಅವರು ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆಯ ಕುರಿತು ತಯಾರಿಸಿರುವ “ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿಗಳ” ಬಗ್ಗೆ ಕ್ಷೇತ್ರ ಮಟ್ಟದ ಬಾಗೀದಾರರಿಗೆ ತರಬೇತಿ ನೀಡಿದರು.
ಕಾರ್ಯಗಾರದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ತಾಲೂಕಾ ಐಇಸಿ ಸಂಯೋಜಕ ಫಕೀರಪ್ಪ ತುಮ್ಮಣ್ಣನವರ ಸೇರಿದಂತೆ ಉಪಸ್ಥಿತರಿದ್ದರು.
Leave a Comment