ಯಲ್ಲಾಪುರ : ಮಕ್ಕಳಲ್ಲಿರುವ ಸೃಜನಾತ್ಮಕ ಅಭಿವ್ಯಕ್ತಿಯನ್ನು, ಪ್ರತಿಭೆಗಳನ್ನು ಹೊರತರಲು ಇಂತಹ ಪ್ರದರ್ಶನಗಳು ತುಂಬಾ ಸಹಾಯಕಾರಿ ಎಂದು ಕಾರವಾರ ಧರ್ಮಪ್ರಾಂತ್ಯದ ಸಂಚಾಲಕರಾದ ಫಾ.ಪೀಟರ್ ಕರ್ನೇರಿಯಾ ಹೇಳಿದರು.
ಪಟ್ಟಣದ ಮದರ್ ತೆರೆಸಾ ಶಾಲೆಯಲ್ಲಿ ಸೋಮವಾರ ಕಲಿಕಾ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಸರ್ವಾಂಗೀಣ ಪ್ರತಿಭೆಯನ್ನು ಹೊರಹೊಮ್ಮಿಸುವುದು ತುಂಬಾ ಮಹತ್ವದ ಕೆಲಸವಾಗಿದೆ. ಅದನ್ನು ಹೊರತರುವ ಕೆಲಸ ಆಗಬೇಕು ಎಂದು ಹೇಳಿದರು.
ಪ್ರತಿಯೊಂದು ತರಗತಿಯ ವಿದ್ಯಾರ್ಥಿಗಳು ಆಕರ್ಷಕವಾದ ಮಾದರಿಗಳನ್ನು ಮಾಡಿ ಪ್ರದರ್ಶನ ಮಾಡಿದರು. ಶಿಕ್ಷಕರು ಹಾಗೂ ಪಾಲಕರು ತಮ್ಮ ಮಕ್ಕಳ ಪ್ರದರ್ಶನವನ್ನು ಆಸಕ್ತಿಯಿಂದ ವೀಕ್ಷಿಸಿ, ಮಕ್ಕಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಶಾಲಾ ಮುಖ್ಯಸ್ಥರಾದ ಫಾ. ರಾಯಸ್ಟನ್ ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಶ್ವದರ್ಶನ ಶಿಕ್ಷಣ ಮಹಾವಿದಾಲಯದ ಪ್ರಶಿಕ್ಷಣಾರ್ಥಿಗಳು ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸಿದರು. ವಿವಿಧ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶನವನ್ನು ವೀಕ್ಷಿಸಿದರು.
Leave a Comment