ಕಾರವಾರ : ಉತ್ತರಕನ್ನಡ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲಕೋಟೆಯ ಮೇಲೆ ಅಫ್ಲಿಕೇಶನ್ ಫಾರ್ ದಿ ಪೋಸ್ಟ ಆಫ್ ಡಿಸಾಸ್ಟರ್ ಪ್ರೋಫೇಶನಲ್ ಎಂದು ಬರೆದು ಡಿ.31 ರೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಉತ್ತರಕನ್ನಡ ಕಾರವಾರ ವಿಳಾಸಕ್ಕೆ ಅಂಚೆ ಮುಖಾಂತರ ಅಥವಾ ಖದ್ದಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ http://uttara kannada.nic.in ಜಾಲತಾಣದಲ್ಲಿ ನೋಡಬಹುದು ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ ಪ್ರಕಟಣೆಯಲ್ಲಿ ತಿಳಿಸಿದೆ.
Leave a Comment