• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಸ್‌ಸ್ಟ್ಯಾಂಡ್‌ನಲ್ಲಿ ಪಿಕ್‌ಪಾಕೆಟ್‌:ಅಂತರ್‌ ಜಿಲ್ಲಾ ಕಳ್ಳರ ಬಂಧನ

December 24, 2021 by Jayaraj Govi Leave a Comment

ಯಲ್ಲಾಪುರ : ಯಲ್ಲಾಪುರ ಬಸ್‌ಸ್ಟ್ಯಾಂಡ್‌ನಲ್ಲಿ ಪಿಕ್‌ಪಾಕೆಟ್‌ ಮಾಡಿ 30 ಸಾವಿರ ರೂ.ಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತರ್‌ ಜಿಲ್ಲಾ ಕಳ್ಳರನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

IMG 20211223 WA0315


ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದ ಅಶೋಕ ಹನುಮಂತಪ್ಪ ತಿಗಡಿ ಅಲಿಯಾಸ್‌ ಆಸ್ಯಾ, ಅನೀಲ್ ದಿಲೀಪ್ ಕಂಜರಬಾದ್ ಅಲಿಯಾಸ್‌ ಗಂಗ್ಯಾ, ಶೇಖಪ್ಪ ಬಸಪ್ಪ ಗುಳಗಣ್ಣನವರ ಬಂಧಿತ ಆರೋಪಿಗಳಾಗಿದ್ದು, ಡಿ.17 ರಂದು ಮದ್ಯಾಹ್ನ 2 ಗಂಟೆ ಸುಮಾರಿಗೆ ತಾಲೂಕಿನ ಹುಣಶೆಟ್ಟಕೊಪ್ಪದ ನಿವೃತ್ತ ಶಿಕ್ಷಕ ದೇವೆಂದ್ರ ದೇಮಣ್ಣಾ ಗುಂಡುಪಕರ್(80) ಇವರು ಯಲ್ಲಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಹಳಿಯಾಳಕ್ಕೆ ಹೋಗಲು ಶಿರಸಿ-ಬೆಳಗಾಂವ ಬಸ್ ಹತ್ತುವಾಗ ತಮ್ಮ ಹೆಗಲಿಗೆ ಹಾಕಿಕೊಂಡಿದ್ದ ಬ್ಯಾಗಿನ ಕೆಳಭಾಗವನ್ನು ಹರಿತವಾದ ವಸ್ತುವಿನಿಂದ ಕತ್ತರಿಸಿ ಬ್ಯಾಗನಲ್ಲಿದ್ದ 30,000/- ರೂಪಾಯಿ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.

IMG 20211223 WA0316

ಈ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನತ್ತಿದ ಯಲ್ಲಾಪುರ ಪೊಲೀಸರು, ಹುಬ್ಬಳ್ಳಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ಕಳ್ಳತನ ಮಾಡಿದ ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಟಾಟಾ ಮಾಂಜ್ ಕಾರು ಜಪ್ತು ಪಡಿಸಿಕೊಳ್ಳಲಾಗಿದೆ. ಇನ್ನು ಇಬ್ಬರು ಆರೋಪಿತರು ತಲೆ ಮರೆಸಿಕೊಂಡಿದ್ದು, ತನಿಖೆ ನಡೆಸಲಾಗಿದೆ. ಬಂಧಿತ ಆರೋಪಿತರು ಅಂತರ್‌ ಜಿಲ್ಲಾ ಕಳ್ಳರಾಗಿದ್ದು, ಈ ಹಿಂದೆ ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುತ್ತದೆ.

IMG 20211223 WA0317


ಸಿಪಿಐ ಸುರೇಶ ಯಳ್ಳೂರ, ಪಿ.ಎಸ್.ಐ ಪ್ರಿಯಾಂಕಾ ನ್ಯಾಮಗೌಡ ಇವರ ನೇತ್ರತ್ವದಲ್ಲಿ ಸಿಬ್ಬಂದಿಯವರಾದ ಬಸವರಾಜ ಹಗರಿ, ಮಹಮ್ಮದ್ ಶಫೀ ಶೇಖ್, ಗಜಾನನ ನಾಯ್ಕ, ವಿನೋದಕುಮಾರ, ಬಸವರಾಜ ಡಿ.ಕೆ, ಹಾಗೂ ಶೋಭಾ ನಾಯ್ಕ ಇವರು ಆರೋಪಿತರನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Crime, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...