
ಯಲ್ಲಾಪುರ: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸತತ ನಾಲ್ಕನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಒಮ್ಮೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಾಲೂಕಿನ ಕಿರವತ್ತಿ ಉರ್ದು ಶಾಲೆಯ ಶಿಕ್ಷಕ, ಕ್ರೀಡಾಪಟು ದಿವಾಕರ ಮರಾಠಿ ಅವರನ್ನು ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಉತ್ತರಕನ್ನಡ, ಯುವಜನ ಸಬಲೀಕರಣ ಇಲಾಖೆ ಉತ್ತರ ಕನ್ನಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪರವಾಗಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು. ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಅವರು ಪದಕ ಗಳಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಎಲ್ಲಾ ತಾಲೂಕಿನ ನೌಕರರ ಸಂಘದ ಅಧ್ಯಕ್ಷರುಗಳು ಇದ್ದರು.
Leave a Comment