• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಿಷ್ಠಾವಂತ ಕಾರ್ಯಕರ್ತರು ಜೆಡಿಎಸ್ ನಲ್ಲಿಯೇ ಇದ್ದಾರೆ :ಮಿರ್ಜಾನಕರ್

January 5, 2022 by Jayaraj Govi Leave a Comment

IMG 20220105 WA0251

ಯಲ್ಲಾಪುರ: ಇದೀಗ ಪೂರ್ಣ ಪ್ರಮಾಣದಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ದಿಶೆಯಲ್ಲಿ ಹಳೆಯ ಸಮಿತಿಗಳನ್ನು ವಿಸರ್ಜಿಸಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಮುನಾಪ್ ಮಿರ್ಜಾನಕರ್‌ ಹೇಳಿದರು.
ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , . ವಿವಿಧ ಕಾರಣಗಳಿಂದ ಪಕ್ಷ ಹಿನ್ನೆಡೆ ಅನುಭವಿಸಿದ್ದ ಹಿನ್ನೆಲೆಯಲ್ಲಿ ತಟಸ್ಥವಾಗಿದ್ದು,ಸದ್ಯದಲ್ಲಿಯೇ ಪೂರ್ಣ ಪ್ರಮಾಣದ ಸಮಿತಿ ರಚಿಸಲಾಗುವುದು. ಚುನಾವಣೆ ಬಂದಾಗ ಹೊರಗಿನಿಂದ ಬಂದ ಅಭ್ಯರ್ಥಿಗಳು ಸ್ಪರ್ದಿಸುವದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿತ್ತು. ಈ ಬಗ್ಗೆ ಕುಮಾರಣ್ಣ ಅವರಿಗೆ ಮನವರಿಕೆ ಮಾಡಲಾಗಿದೆ. ಅವರು ಸ್ಥಳೀಯ ಅಭ್ಯರ್ಥಿಗಳನ್ನು ಕಾರ್ಯಕರ್ತರ ಅನುಮತಿಯಂತೆ ಆಯ್ಕೆ ಮಾಡಿ, ಕ್ಷೇತ್ರದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲಾಗುವುದೆಂದು ಭರವಸೆ ನೀಡಿದ್ದಾರೆ. ಸ್ಥಳೀಯವಾಗಿ ನಾಯಕತ್ವ ಇಲ್ಲದೇ ಕಾರ್ಯಕರ್ತರು ತಟಸ್ಥರಾಗಿದ್ದಾರೆ. ವಲಸೆ
ಹೊದವರನ್ನು ತಟಸ್ಥ ಇರುವವರನ್ನು ಮರಳಿ ಕರೆತಂದು ಪಕ್ಷವನ್ನು ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಮುಂದಾಳತ್ವದಲ್ಲಿ ಬಲವರ್ಧನೆ ಮಾಡಲಾಗುವುದು ಎಂದರು.

ಕ್ಷೇತ್ರಾಧ್ಯಕ್ಷ ಮುತ್ತಣ್ಣ ಸಂಗೂರಮಠ ಮಾತನಾಡಿ, ಕಾಂಗ್ರೆಸ್ ಬಿಜೆಪಿ ಯಾವದೇ ಪಕ್ಷಕ್ಕೂ ಸೇರದೆ ನಮ್ಮ ತಟಸ್ಥರಾಗಿದ್ದ ಅಂತಹ ಕಾರ್ಯಕರ್ತರು ಇದ್ದಾರೆ.ಅವರ ಮನವೊಲಿಸಿ,ಸಕ್ರಿಯತೆಯಿಂದ ಪಕ್ಷ ಸಂಘಟನೆ ಮಾಡಲಾಗುವದು . ನಾಯಕರು ಪಕ್ಷಕ್ಕೆ ವಂಚಿಸಿದರೂ, ಕಾರ್ಯಕರ್ತರು, ನಿಷ್ಠಾವಂತರು ಜೆಡಿಎಸ್ ನಲ್ಲಿಯೇ ಇದ್ದಾರೆ. ಕುಮಾರಸ್ವಾಮಿ ಸಿ.ಎಂ ಆಗಿದ್ದಾಗ ಅರ್ಜಿ ಹಾಕದೇ ಇದ್ದರೂ ಎಲ್ಲ ರೈತರ ಸಾಲ ಮನ್ನಾ ಮಾಡಿದ್ದರು. ಅವರ ರೈತಪರ ಕಾಳಜಿ ಜನರು ಮರೆತಿಲ್ಲ ಎಂದರು. ಪಕ್ಷದ ತಾಲೂಕು ಅಧ್ಯಕ್ಷ ಬೆನಿತ್ ಸಿದ್ದಿ ಮಾತನಾಡಿ, ಕುಮಾರಣ್ಣ ಸಾಧನೆಯನ್ನು ಮತದಾರರಿಗೆ ಮನವರಿಕೆ ಮಾಡಿ ಮತ್ತೆ ಪಕ್ಷ ಬಲಪಡಿಸಲಾಗುವುದು ಎಂದರು. ಮುಂಡಗೋಡ ತಾಲೂಕು ಅಧ್ಯಕ್ಷ ತುಕಾರಾಮ ಗಡಕರ್‌, ಉಪಾಧ್ಯಕ್ಷ ನಾಗರಾಜ ತಳವಾರ, ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮ್ಮದ್ ಗುರನಳ್ಳಿ ಯಲ್ಲಾಪುರ ಉಪಾಧ್ಯಕ್ಷ ಸುಧಾಕರ ನಾಯ್ಕ ಮಂಚಿಕೇರಿ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...