
ಯಲ್ಲಾಪುರ : ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಸರಕಾರಕ್ಕೆ ಸಂಪೂರ್ಣ ಅರಿವಿದ್ದು ಅದನ್ನು ಸಹಾನುಭೂತಿಯಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವದಾಗಿ ಸಚಿವ ಶಿವರಾಮ ಹೆಬ್ಬಾರ ಭರವಸೆ ನೀಡಿದರು.
, ಅತಿಥಿ ಉಪನ್ಯಾಸಕರ ಪರವಾಗಿ ವಿನಂತಿ ಮಾಡಿದ ಯಲ್ಲಾಪುರ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರ ತಂಡದ ಜೊತೆಗೆ ಸಚಿವರು ವಿಸ್ತ್ರತ ಚರ್ಚೆ ನಡೆಸಿದರು. ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದ್ದು ಸರಕಾರ ಈ ಕುರಿತು ಅವರಿಗೆ ನ್ಯಾಯ ಒದಗಿಸಬೇಕೆಂದು ನಿಯೋಗ ಆಗ್ರಹಿಸಿತು.
ಇಡೀ ರಾಜ್ಯದ ಅತಿಥಿ ಉಪನ್ಯಾಸಕರ ಸಮಸ್ಯೆ ಇದಾಗಿದ್ದು, ಅದನ್ನು ಬಗೆಹರಿಸಲು ತಾಂತ್ರಿಕ ತೊಂದರೆಯಿದೆ. ಆರ್ಥಿಕ ದೃಷ್ಟಿಯಿಂದ ನೋಡಿದಾಗ, ದಿನಗೂಲಿ ಕೆಲಸ ಮಾಡುವ ಕಾರ್ಮಿಕರಿಗಿಂತ ಸ್ನಾತಕೋತ್ತರ ಪದವಿ ಪಡೆದಿರುವ ಉಪನ್ಯಾಸಕರ ಸ್ಥಿತಿ ಶೋಚನೀಯವಾಗಿದೆ. ಮಾನವೀಯ ದೃಷ್ಟಿಕೋನದಿಂದ ಸಮಸ್ಯೆ ಬಗೆಹರಿಸಲು ಈಗಾಗಲೇ ಪ್ರಧಾನ ಕಾರ್ಯದರ್ಶಿಗಳ ನೇತ್ರತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ನೀಡುವ ಆದ ಮೇಲೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ, ವಿಶ್ರಾಂತ ಪ್ರಾಚಾರ್ಯ ಶ್ರೀರಂಗ ಕಟ್ಟಿ, ಪ.ಪಂ.ಅಧ್ಯಕ್ಷೆ ಶ್ರೀಮತಿ ಸುನಂದಾ ದಾಸ, ರಾಜೇಂದ್ರ ಬದ್ದಿ, ಎಂ.ಎಂ.ಶೇಖ, ಗೋಪಾಲ ನೇತ್ರೆಕರ, ಭಾಜಪ ತಾಲೂಕಾಧ್ಯಕ್ಷ ಜಿ.ಎನ್. ಗಾಂವ್ಕರ ಉಪಸ್ಥಿತರಿದ್ದರು
Leave a Comment