ಹೊನ್ನಾವರ : ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸುವ ಕುರಿತು ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ತಾಲೂಕಾ ವ್ಯಾಪ್ತಿಗಳಲ್ಲಿ ಯಾವುದೇ ಹಬ್ಬಗಳನ್ನು ಜನ ಸೇರದಂತೆ ಸಾಂಕೇತಿಕವಾಗಿ ಆಚರಿಸಬೇಕಿದೆ ಎಂದು ತಹಶೀಲ್ದಾರ್ ನಾಗರಾಜ್ ನಾಯ್ಕಡ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೊಸ ನಿಯಮ ಜಾರಿಯಾಗಿದ್ದು, ಜ.13 ರ ಹುರುವಾರದಿಂದ ಮುಂದಿನ ಆದೇಶದವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿAದ ಬೆಳಿಗ್ಗೆ 5 ಗಂಟೆಯ ವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಈ ನಿಯಮ ಹೊನ್ನಾವರಕ್ಕೂ ಅನ್ವಯಿಸಲಿದ್ದು, ಸಾರ್ವಜನಿಕರು ಸಹಕರಿಸಬೆಕು.
ಕೊರೋನಾ ನಿಯಮ ಪಾಲಿಸುವ ಬಗ್ಗೆ ಸರ್ಕಾರ ಸೂಚನೆ ನೀಡಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಿದೆ. ಸಂಕ್ರಾತಿ ಹಬ್ಬಗಳ ಪ್ರಯುಕ್ತ ದೇವಾಲಯದ ಶಾಸ್ತç ಸಂಪ್ರದಾಯದAತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಲು ಅನುಮತಿಸಿದೆ.
Leave a Comment