ಯಲ್ಲಾಪುರ : ಎಲ್ಲ ಜಿಲ್ಲೆ, ತಾಲೂಕುಗಳಿಗೂ ಸಾಂಪ್ರದಾಯಿಕವಾಗಿ ಕೆಲ ಸಮಸ್ಯೆಗಳಿರುತ್ತವೆ. ಅಂತೆಯೇ ಯಲ್ಲಾಪುರಕ್ಕೂ ಕೆಲ ಸಮಸ್ಯೆಗಳಿರಬಹುದು. ಅವುಗಳನ್ನು ಎದುರಿಸಿ ಸಮರ್ಥವಾದ ಆಡಳಿತ ನಡೆಸಲು ಎಲ್ಲರ ಸಹಕಾರದ ಅವಶ್ಯಕತೆ ಇದೆ ಎಂದು ಶಿರಸಿಯ ಸಹಾಯಕ ಆಯುಕ್ತ ದೇವರಾಜ್ ಆರ್. ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಹಿಂದುಳಿದ ಮಕ್ಕಳ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರನೀಡಿ , ಯಾವದೇ ವ್ಯಸನಕ್ಕೆ ಬಲಿಯಾಗದಂತೆ ನಿಗಾ ವಹಿಸಿ , ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿ ನೀವೆ ಪೋಷಕ ತರಹ ಅವರನ್ನು ನೋಡಿಕೊಳ್ಳಬೇಕು ಸಮಾಜಕಲ್ಯಾಣ ಇಲಾಖೆ ಅಧಿಕಾರಿಗೆ ಹೇಳಿದರು. ಅಬಕಾರಿ ಇಲಾಖೆಯಿಂದ ಮಾಹಿತಿ ಪಡೆದು ಮಾದಕ ವಸ್ತುಗಳನ್ನು ಹತೋಟಿಗೆ ತರುವಂತೆ ಸೂಚಿಸಿದರು. ಲೋಕೋಪಯೋಗಿ ಇಲಾಖೆಯಿಂದ ಎಲ್ಲ ರಸ್ತೆಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ತಾಲೂಕು ಪಂಚಾಯತದಿAದ ತೆರಿಗೆಯನ್ನು ಸಮರ್ಪಕವಾಗಿ ಸಂಗ್ರಹಿಸುವAತೆ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಮಾತನಾಡಿ, ಈ ಬಾರಿಯ ಎಸ್ ಎಲ್ ಸಿ ಪರೀಕ್ಷೆಗೆ ಸಂಪೂರ್ಣ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಕೋವಿಡ್ನಿಂದ ಬಂದ್ ಆಗಿದ್ದ ಶಾಲೆಗಳನ್ನು ಪುನಃ ಪ್ರಾರಂಭಿಸಲಾಗಿದೆ. ಶೀಥಿಲ ಶಾಲಾ ಕಟ್ಟಡಗಳ ತೆರವಿಗೆ ಮಾಹಿತಿ ನೀಡಲಾಗಿದ್ದು, ತಾ.ಪಂ. ದಿಂದ ಕೊನೆಯ ಹಂತದ ಅನುಮತಿ ಒಂದೇ ಬಾಕಿ ಇದೆ. ಅದನ್ನು ಹೊರತುಪಡಿಸಿ ಉಳಿದೆಲ್ಲ ಶೈಕ್ಷಣಿಕ ಕಾರ್ಯಗಳು ಸುಗಮವಾಗಿ ನಡೆಯುತ್ತಿದೆ ಎಂದರು. ಅರಣ್ಯಾಧಿಕಾರಿ ಮಾಹಿತಿ ಜಲಪಾತ ಗಳ ಬಳಿ ವೀಕ್ಷಣೆಗೆ ಬ್ಯಾರಿಕೇಡ ಆಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.ಸುರಕ್ಷಾ ಕ್ರಮಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.ತಾಲೂಕಿನ ಎಲ್ಲ ಇಲಾಖಾಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಮಾಹಿತಿಯನ್ನು ಆಯುಕ್ತರಿಗೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ತಾಲೂಕಾ ವೈದ್ಯಾಧಿಕಾರಿ ಡಾ. ನರೇಂದ್ರ ಪವಾರ, ಲೋಕೋಪಯೋಗಿ ಸಹಾಯಕ ಇಂಜಿನಿಯರ್ ವಿ.ಎಂ.ಭಟ್ಟ, ತಾಲೂಕ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಪ.ಪಂ. ಮುಖ್ಯಾಧಿಕಾರಿ ಸಂಗನಬಸಯ್ಯ ಅರಣ್ಯಾಧಿಕಾರಿ ಬಾಲ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment