ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ೫ ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಏಪ್ರಿಲ್ ೧ ರಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಘೋಷಣೆ ಮಾಡಿದ್ದಾರೆ.
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪ್ರಸುತ್ತ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು ೫ ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಹೆಚ್ಚುವರಿಯಾಗಿ ಒಂದು ಕೆಜಿ ನೀಡಲಾಗುವುದು ಎಂದು ತಿಳಿಸಿದರು.
Leave a Comment