ಯಲ್ಲಾಪುರ: ಸಾರ್ವಜನಿಕರ ಬಳಿಯೇ ತೆರಳಿ ಅಹವಾಲುಗಳನ್ನು ಸ್ಡೀಕರಿಸಿ ತಾಲೂಕಿನ ಉಮ್ಮಚಗಿಯ ವಿದ್ಯಾಗಣಪತಿ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಕನ್ನಡ ಶಾಲೆಯಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.ನಂತರ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಮಾತನಾಡಿ ಸಾರ್ವಜನಿಕರ ಬಳಿಯೇ ತೆರಳಿ ಅಹವಾಲು ಸ್ವೀಕರಿಸಿ ಅದಕ್ಕೆ ಪರಿಹಾರ ನೀಡುವ ಕಾರ್ಯವನ್ನು ಈ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ರೈತರು ಬೆಳೆ ಹಾನಿ, ಪರಿಹಾರ ಕುರಿತಂತೆ ವಿವಿಧ ಸಮಸ್ಯೆಗಳ ಕುರಿತು ಅವರ ಗಮನಕ್ಕೆ ತಂದರು.ಅದಕ್ಕೆ ಸೂಕ್ತ ಪರಿಹಾರ ಕುರಿತಂತೆ ಸ್ಥಳದಲ್ಲಿಯೇ ಇದ್ದ ಸಂಬAಧಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.ಇದೇ ಸಂದರ್ಭದಲ್ಲಿ ಬೆಳಕು ಯೋಜನೆ ಯಡಿಯಲ್ಲಿ ಅರ್ಜಿ ಸಲ್ಲಿಸಿದರೂ ವಿದ್ಯುತ್ ಸಂಪರ್ಕ ನೀಡಿಲ್ಲವೆಂಬ ದೂರು ಸಾರ್ವಜನಿಕರಿಂದ ಕೇಳಿಬಂತು ತಕ್ಷಣ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಸಂಬAದಿಸಿದ ಪಿಡಿಓ ಹಾಗೂ ಹೆಸ್ಕಾಂ ಅಧಿಕಾರಿಗಳಿಗೆ ಒಂದು ವಾರದಲ್ಲಿ ಸಮಸ್ಯೆ ಪರಿಹರಿಸಲೇ ಬೇಕೆಂದು ಖಡಕ್ ಸೂಚನೆ ನೀಡಿದರು.ನಂತರ.ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸರ್ಕಾರಿ ಶಾಲೆ,ಅಂಗನವಾಡಿ ಶಾಲೆ ,ರಕ್ತಧಾನ ಶಿಬಿರಕ್ಕೆ ಭೇಟಿ ನೀಡಿದರು.. ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕಾರಿಸಿದರು. ವಿವಿಧ ಪ್ರಮಾಣಪತ್ರ ವಿತರಣೆ, ಚುನಾವಣೆ ಸಂಬAಧಿಸಿದ ಫಾರಂ ನಂಬರ್ ೬,೭,೮ ಹಾಗೂ ೮ಎ ನೊಂದಣಿ ಮಾಡುವ ಕುರಿತು ಮಾಹಿತಿ, ಚವತ್ತಿ ಆರೋಗ್ಯ ಕೇಂದ್ರಕ್ಕೆ ಭೇಟಿ, ಕೋಟೆಮನೆ ಪರಿಶಿಷ್ಟ ವರ್ಗ,ಪರಿಶಿಷ್ಟ ಪಂಗಡ ಕಾಲನಿಗಳ ಜನರ ಕುಂದು ಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಶಿರಸಿ ಉಪವಿಭಾಗಾದಿಕಾರಿ ದೇವರಾಜ್ ಆರ್, ತಹಶೀಲ್ದಾರ ಶ್ರೀಕೃಷ್ಣ ಕಾಮಕರ್,ತಾಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ , ಗ್ರಾಪಂಚಾಯತಿ ಅಧ್ಯಕ್ಷೆ ರೂಪಾ ಪೂಜಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿರಿದ್ದರು.
Leave a Comment