ಹೊನ್ನಾವರ : ದೇಶದ ಪವಿತ್ರ ಸ್ಥಳ ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆಂದು ದೇಶದ ರಾಷ್ಟçಧ್ವಜಕ್ಕೆ ಅವಮಾನ ಮಾಡಿದ ಕರ್ನಾಟಕ ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವ ಈಶ್ವರಪ್ಪರವನ್ನು ತಕ್ಷಣ ಸಂಪುಟದಿAದ ವಜಾಗೊಳಿಸುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಎಸ್. ನಾಯ್ಕ ಆಗ್ರಹಿಸಿದ್ದಾರೆ.
ಇಂದು ಹೊನ್ನಾವರ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸಚಿವ ಈಶ್ವರಪ್ಪರವನ್ನು ವಜಾಗೊಳಿಸುವಂತೆ ಆಗ್ರಹಿಸಿ ನಡೆಸಿದ ಧರಣಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಪ್ರಾಸ್ತವಿಕವಾಗಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಬಿಜೆಪಿ ಪಕ್ಷಕ್ಕೆ ಯಾವುದೇ ಭದ್ದತೆ ಇಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಜನರ ಭಾವನೆಗಳನ್ನು ಕೆರಳಿಸುವ ಕೆಲಸಕ್ಕೆ ಮುಂದಾಗಿದೆ ಎಂದರು. ಸ್ವಾತಂತ್ರö್ಯ ಸಂಗ್ರಾಮಕ್ಕೆ ಸ್ಪೂರ್ತಿ ತುಂಬಿ ನಾಡಿನ ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ ಬಲಿಧಾನದ ಪ್ರತಿಕವಾಗಿರುವ ರಾಷ್ಟçಧ್ವಜದ ಬದಲಾಗಿ ಕೆಂಪು ಕೋಟೆಯ ಮೇಲೆ ಮುಂದಿನ ದಿನದಲ್ಲಿ ಭಗವಾ ಧ್ವಜ ಹಾರಿಸಲಾಗುವುದು ಎನ್ನುವ ಸಚಿವ ಈಶ್ವರಪ್ಪನವರ ಹೇಳಿಕೆ ಅಕ್ಷಮ್ಯ ಅಪರಾಧ ಎಂದರು.

ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಎಸ್. ನಾಯ್ಕ ಮಾತನಾಡಿ ಗ್ರಾಮೀಣ ಮತ್ತು ಪಂಚಾಯತ ರಾಜ್ ಖಾತೆಯ ಸಚಿವರಾದ ಈಶ್ವರಪ್ಪನವರು ತಮ್ಮ ಖಾತೆಯಲ್ಲಿ ಗ್ರಾಮೀಣ ಭಾಗದ ಜನತೆಗೆ ಮಾಡಲು ನೂರಾರು ಕೆಲಸಗಳಿದ್ದರೂ, ಅವುಗಳನ್ನು ಗಣನೆಗೆ ತೆಗೆದುಕೊಳ್ಳದೇ ಈಗ ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಜನರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದರು.
-2-
ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಮಾತನಾಡಿ ರಾಷ್ಟçಧ್ವಜದ ಬದಲಾಗಿ ಭಗವಾಧ್ವಜ ಹಾರಿಸಲಾಗುವುದು ಎನ್ನುತ್ತಿರುವ ಈಶ್ವರಪ್ಪನವರನ್ನು ತಕ್ಷಣ ಸಚಿವ ಸಂಪುಟದಿAದ ವಜಾಗೊಳಿಸಿ ಅವರ ಮೇಲೆ ಎಫ್.ಆಯ್.ಆರ್. ದಾಖಲಿಸುವಂತೆ ಆಗ್ರಹಿಸಿದರು.
ಧರಣಿ ಪ್ರತಿಭಟನೆಯ ನಂತರ ಹೊನ್ನಾವರ ಪ್ರಭಾರಿ ತಹಶೀಲ್ದಾರ ಶ್ರೀಮತಿ ಉಷಾ ಪಾವಸ್ಕರ ಮೂಲಕ ಕರ್ನಾಟಕ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರಿಗೆ ತಕ್ಷಣ ಸಚಿವ ಈಶ್ವರಪ್ಪನವರನ್ನು ವಜಾಗೊಳಿಸುವಂತೆ ಆಗ್ರಹಿಸಿದ ಮನವಿಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ, ಪಕ್ಷದ ಹಿರಿಯ ಮುಖಂಡರಾದ ಚಂದ್ರಶೇಖರ ಗೌಡ, ಕೃಷ್ಣ ಗೌಡ, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ, ಬಾಲಚಂದ್ರ ನಾಯ್ಕ, ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ, ರಾಜು ನಾಯ್ಕ ಮಂಕಿ, ವಿನೋದ ನಾಯ್ಕ ಕರ್ಕಿ, ಚಂದ್ರಕಾAತ ಕೊಚ್ರೇಕರ, ಕೃಷ್ಣ ಅಂಬಿಗ, ಸುರೇಶ ಮೇಸ್ತ, ಹುಲಿಯಣ್ಣ ಗೌಡ, ಸುಭಾಷ ಮೇಸ್ತ, ಕೇಶವ ಮೇಸ್ತ, ಜಿಕ್ರಿಯಾ ಶೇಖ್, ಆಗ್ನೇಲ್ ಡಯಾಸ್, ಕೆ.ಎಚ್.ಗೌಡ, ಹರೀಶ್ಚಂದ್ರ ನಾಯ್ಕ, ಅಣ್ಣಯ್ಯ ನಾಯ್ಕ, ಕೃಷ್ಣ ಹರಿಜನ, ಮೋಹನ ಆಚಾರಿ, ಕೃಷ್ಣಾ ಮಾರಿಮನೆ, ಮಹೇಶ ನಾಯ್ಕ ಇನ್ನೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
Leave a Comment