ಹೊನ್ನಾವರ : ತಾಲ್ಲೂಕಿನ ಹಳದಿಪುರ ಚಿಪ್ಪಹಕ್ಕಲ ಕ್ರಾಸ್ ಸಮೀಪ ರಾಷ್ಟಿçÃಯ ಹೆದ್ದಾರಿ 66 ರಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಕಾರು ಚಾಲಕ ಮದ್ಯದ ನಶೆಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆ ಮಾಡಿದ್ದರಿಂದ ಅಪಘಾತ ನಡೆದಿದೆ ಎಂದು ದೂರು ದಾಖಲಾಗಿದೆ.
ಬೈಕ್ ಸವಾರರಾದ, ವೃತ್ತಿಯಲ್ಲಿ ಸೈನಿಕರಾಗಿರುವ ಶಾಂತಾರಾಮ ಭಂಡಾರಿ ಹಾಗೂ ಅವರ ಪತ್ನಿ ಅನಿತಾಕುಮಾರಿ ಅವರಿಗೆ ಗಂಭೀರ ಗಾಯವಾಗಿದೆ. ಅಪಘಾತದ ನಂತರ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಕಾರು ಚಾಲಕ ರಾಜೇಶ್ ಪೈ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment