• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದೇಶದ ಜನತೆಗೆ ಕಾಂಗ್ರೇಸ್ ಪಕ್ಷವೊಂದೇ ಆಶಾಕಿರಣ;ಮಾಜಿ ಸಚಿವ ಆರ್. ವಿ. ದೇಶಪಾಂಡೆ

March 2, 2022 by Sachin Hegde Leave a Comment

ಹೊನ್ನಾವರ : ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ ಸರಕಾರ ನಾಡಿನ ಜನತೆಗೆ ಜನಪರವಾದ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ದೇಶದ ಜನತೆಗೆ ಕಾಂಗ್ರೇಸ್ ಪಕ್ಷವೊಂದೇ ಆಶಾಕಿರಣವಾಗಿದೆ ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಅಭಿಪ್ರಾಯ ಪಟ್ಟರು.

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ಏರ್ಪಡಿಸಿದ “ಡಿಜಿಟಲ್ ಸದಸ್ಯತ್ವ ಅಭಿಯಾನ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಖ್ಯ ನೊಂದಣಿಕಾರರು ಹಾಗೂ ಸಾಮಾನ್ಯ ನೊಂದಣಿಕಾರರನ್ನು ಉದ್ದೇಶಿಸಿ ಮಾತನಾಡಿದರು.

  • Prasanna Shetty
  • RV Deshapande

ಭಾರತದಂತಹ ಸಂಪದ್ಭರಿತ, ಮಹಾನ್ ದೇಶವನ್ನು ಕೇವಲ ಸುಳ್ಳು ಭರವಸೆಗಳಿಂದ ನಡೆಸಲು ಸಾಧ್ಯವಿಲ್ಲ. ಸುಳ್ಳು ಭರವಸೆಗಳನ್ನು ಕೇವಲ ತಾತ್ಕಾಲಿಕವಾಗಿ ನೀಡಬಹುದೇ ಹೊರತು ಭವಿಷ್ಯದ ಭಾರತಕ್ಕಲ್ಲ ಎಂದರು. ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ. ಸರಕಾರದ ಆಡಳಿತದಿಂದ ಜನ ತತ್ತರಿಸಿ ಹೋಗಿದ್ದಾರೆ. ವಿದ್ಯಾವಂತ ಯುವಜನಾಂಗ ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ಬಡ ಮತ್ತು ಮದ್ಯಮ ವರ್ಗದ ಜನತೆ ಬೆಲೆ ಏರಿಕೆಯಿಂದ ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುತ್ತಿದ್ದಾರೆ. ಪೆಟ್ರೋಲ್ ಡೀಸೆಲ್, ಅಡುಗೆ ಅನಿಲಗಳ ಬೆಲೆ ಹಿಂದೆಂದೂ ಕಾಣದಷ್ಟು ಏರಿಕೆಯಾಗಿದೆ. ಹಾಗಾಗಿ ಜನಮಾನಸದ ನಡುವೆ ಕಾಂಗ್ರೆಸ್ ಪಕ್ಷವೇ ದೇಶದ ಶಕ್ತಿಯಾಗಿದ್ದು, ದೇಶಾಧ್ಯಂತ ಕಾಂಗ್ರೆಸ್ ಪಕ್ಷದ ಡಿಜಿಟಲ್ ನೋಂದಣಿ ಕಾರ್ಯಕ್ರಮ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಳ್ಳುವ ಮೂಲಕ “ಡಿಜಿಟಲ್ ಸದಸ್ಯತ್ವ” ಅಭಿಯಾನವನ್ನು ಯಶಸ್ವಿಗೊಳಿಸಿ, ಕಾಂಗ್ರೆಸ್ ಪಕ್ಷವನ್ನು ಶಕ್ತಿಶಾಲಿ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ ಕಾಂಗ್ರೆಸ್ ಇತಿಹಾಸದಲ್ಲಿಯೇ ಪ್ರಥಮ ಬಾರಿ “ಡಿಜಿಟಲ್ ಸದಸ್ಯತ್ವ ನೋಂದಣಿ” ಜಾರಿಯಲ್ಲಿ ತಂದಿದ್ದು, ದೇಶದ ಪ್ರಥಮ ಪ್ರಧಾನಿ ಪಂಡಿತ ಜವಾಹಾರಲಾಲ್ ನೆಹರುರವರ ಜನ್ಮದಿನ ನವೆಂಬರ 14 ರಂದು ದೇಶಾದ್ಯಂತ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಲಾಗಿದೆ ಎಂದರು.

ಸಮಾಜದ ಎಲ್ಲ ವರ್ಗದ ಜನತೆ ಜಿಲ್ಲೆಯಾದ್ಯಂತ ಕಳೆದ ಮೂರು ತಿಂಗಳಿಂದ ತುಂಬಾ ಉತ್ಸಾಹದಿಂದ ಈ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಸದಸ್ಯತ್ವ ನೋಂದಣಿ ಮಾಡುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಮಾತನಾಡಿ ಕುಮಟಾ ವಿಧಾನಸಭಾ ಕ್ಷೇತ್ರದ ಎಲ್ಲ 215 ಮತಗಟ್ಟೆಗಳಲ್ಲೂ ಕೂಡ ಈಗಾಗಲೇ ಮುಖ್ಯ ನೋಂದಣಿಕಾರರು ಮತ್ತು ಸಾಮಾನ್ಯ ನೋಂದಣಿಕಾರರ ನೇಮಕವಾಗಿದ್ದು, ಸದಸ್ಯತ್ವ ನೋಂದಣಿ ಕಾರ್ಯ ಅತ್ಯಂತ ಪ್ರಗತಿಯಲ್ಲಿದೆ ಎಂದರು. ಮುಂದಿನ ಒಂದು ತಿಂಗಳೊಳಗಾಗಿ ಎಲ್ಲ ಮತಗಟ್ಟೆಗಳಲ್ಲೂ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯವನ್ನು ಸಂಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಎಲ್ಲರನ್ನೂ ಸ್ವಾಗತಿಸಿ ಮಾತನಾಡಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಡಿಜಿಟಲ್ ಸದಸ್ಯತ್ವ ನೋಂದಣಿಯ ಪ್ರಗತಿಯ ಕುರಿತಂತೆ ಎಲ್ಲರಿಗೂ ಮಾಹಿತಿ ನೀಡಿದರು.

ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪ್ರಸನ್ನ ಶೆಟ್ಟಿ ದೂರದರ್ಶನದಲ್ಲಿ ದೃಶ್ಯ ಬಿತ್ತರಿಸಿ ಡಿಜಿಟಲ್ ಸದಸ್ಯತ್ವದ ಮೂರು ಹಂತದ ಮಾರ್ಗಗಳನ್ನು ಸೇರಿದ ಮುಖ್ಯ ನೋಂದಣಿಕಾರರು ಮತ್ತು ಸಾಮಾನ್ಯ ನೋಂದಣಿಕಾರರಿಗೆ ತರಬೇತಿ ನೀಡುವ ಕಾರ್ಯವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್. ಎನ್. ನಾಯ್ಕ, ಕೆ.ಪಿ.ಸಿ.ಸಿ. ಯಿಂದ ಜಿಲ್ಲಾ ಕಾಂಗ್ರೆಸಿಗೆ ನಿಯುಕ್ತಿಗೊಂಡ ಉಸ್ತುವಾರಿಗಳಾದ ವಿ.ಎಸ್. ಆರಾಧ್ಯ, ಶ್ರೀಮತಿ ಸುಷ್ಮಾ ರಾಜಗೋಪಾಲ ರೆಡ್ಡಿ, ಶ್ರೀನಿವಾಸ ಹಲ್ಲಳ್ಳಿ, ಜಿಲ್ಲಾ ಕಿಸಾನ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ, ಜಿಲ್ಲಾ ಸೇವಾದಳದ ಅಧ್ಯಕ್ಯ ಆರ.ಎಚ್. ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾದ ರವಿಶೆಟ್ಟಿ, ಕವಲಕ್ಕಿ, ಎಂ.ಎನ್. ಸುಬ್ರಹ್ಮಣ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸುಜಾತಾ ಗಾಂವಕರ, ಸೇವಾದಳದ ರಾಜ್ಯ ಸಂಘಟಕ ಸಾಯಿ ಗಾಂವಕರ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಜೀದ್ ಶೇಖ್, ಪಕ್ಷದ ಹಿರಿಯ ಮುಖಂಡರಾದ ಶ್ರೀಪಾದ ಹೆಗಡೆ, ಕಡವೆ, ದಾಮೋದರ ನಾಯ್ಕ, ಪುಷ್ಪಾ ನಾಯ್ಕ, ಕೃಷ್ಣ ಹರಿಜನ,ಆಗ್ನೇಲ್ ಡಾಯಸ್, ಜಿಕ್ರೀಯಾ ಶೇಖ್, ಕೆಚ್.ಗೌಡ, ಸಂದೇಶ ಶೆಟ್ಟಿ, ಲಂಬೋಧರ ನಾಯ್ಕ ಇನ್ನೂ ಹಲವಾರು ಮುಖಂಡರು ಪಾಲ್ಗೊಂಡಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...