
ಯಲ್ಲಾಪುರ :ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಶೆಲ್ ದಾಳಿಗೆ ಮೃತಪಟ್ಟ ವೈದ್ಯಕೀಯ ವಿಧ್ಯಾರ್ಥಿ, ಹಾವೇರಿ ಜಿಲ್ಲೆಯ ಚಳಗೇರಿಯ ನವೀನ್ ರಾಜಶೇಖರ ಗ್ಯಾನ ಗೌಡ ಅವರಿಗೆ ಪಟ್ಟಣದಲ್ಲಿ ಅಂಬೇಡ್ಕರ್ ವೃತ್ತ ದಲ್ಲಿನಾಗರಿಕ ವೇದಿಕೆಯಿಂದ ಆಯೋಜಿಸಿದ್ದ ಶೃದ್ಧಾಂಜಲಿ ಸಲ್ಲಿಸಲಾಯಿತು.
ನಾಗರಿಕ ವೇದಿಕೆಯ ಅಧ್ಯಕ್ಷರಾಮು ನಾಯ್ಕ ಮಾತನಾಡಿ, ಯಾವುದೇ ಸಮಸ್ಯೆ ಹಾಗೂ ಬಿಕ್ಕಟ್ಟಿಗೆ ಯುದ್ಧವೊಂದೇ ಪರಿಹಾರವಲ್ಲ. ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಮೂಲಕ ರಷ್ಯಾ ಉಕ್ರೇನ್ ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲಸಲಿ, ಯುದ್ಧದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಯುದ್ಧದ ಸಂದರ್ಭದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ . ಮೌನಾಚರಣೆ ಹಾಗೂ ನವೀನ್ ಭಾವಚಿತ್ರಕ್ಕೆ ಮೊಂಬತ್ತಿ ಬೆಳಗಿ ಪುಷ್ಪನಮನ ಸಲ್ಲಿಸಲಾಯಿತು. ಪಟ್ಟಣ ಪಂಚಾಯತಿ ಸದಸ್ಯರಾದ ಸೋಮೇಶ್ವರ ನಾಯ್ಕ, ಸತೀಶ ನಾಯಕ್, ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟ ಪ್ರಮುಖರಾದ ನಾಗೇಶ ಯಲ್ಲಾಪುರಕರ್,ಗಜಾನನ ನಾಯ್ಕ, ವಿನೋದ ತಳೇಕರ್,ಬಾಬಾ ಸಾಬ್ ಆಲನ್ ಮುಂತಾದವರು ಇದ್ದರು. ಪತ್ರಕರ್ತ ಕೇಬಲ್ ನಾಗೇಶ ನಿರ್ವಹಿಸಿದರು. ನಾರಾಯಣ ನಾಯಕವಂದಿಸಿದರು.
ಯಲ್ಲಾಪುರ ಹಾಗೂ ಸುದ್ದಿಗಾಗಿ ಗ್ರುಪ್ ಸೇರಿ ; Yellapur news ; Join our whatsapp group
Leave a Comment