ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ದಯಾಳ್ ಅಂತ್ಯೋದಯ ಯೋಜನ ರಾಷ್ಟ್ರೀಯ ನಗರ ಜೀವನೋಪಾಯ (ಡೇ-ನಲ್ಸ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿ 3 ಹುದ್ದೆಗೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನಿಯುಕ್ತಿಗೊಳಿಸಲು ಕಾರವಾರ ನಗರಸಭೆಯು ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ಅರ್ಜಿದಾರರು ತಮ್ಮ ಅರ್ಜಿಯನ್ನು ಕಚೇರಿಯಲ್ಲಿ ಲಭ್ಯವಿರುವ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಾ.25ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭಾ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತ ಆರ್.ಪಿ.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment