ಅಂಕೋಲಾ : ಸರಿಯಾದ ಕೆಲಸ ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಳಾಬಂದರ ಗ್ರಾಮದಲ್ಲಿ ನಡೆದಿದೆ.
ನಾಗವೇಣಿ ಪಡ್ತಿ (27) ಎಂಬ ಯುವತಿಯೇ ಆತ್ಮಹತ್ಯೆಗೆ ಶರಣಾದವಳು. ನಾಗವೇಣಿ ತನ್ನ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣವನ್ನು ಸೇವಿಸಿ, ತನ್ನ ಸಹೋದರಿ ಸುವರ್ಣಾಳೊಂದಿಗೆ ಗೋಕರ್ಣ ಜಾತ್ರೆಗೆ ತೆರಳಿದ್ದಾಳೆ.
ಜಾತ್ರೆ ಮುಗಿಸಿಕೊಂಡು ವಾಪಸ್ ಬರುತ್ತಿರುವಾಗ ವಾಂತಿ ಮಾಡಿಕೊಂಡಿದ್ದು,ಮನೆಯವರು ತಕ್ಷಣ ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment