ಟೊರೊಂಟೊ: ಕೆನಡಾದ ಒಂಟಾರಿಯೋ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವ್ಯಾನು ಮತ್ತು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಜಸ್ಪಂದರ್ಸಿಂಗ್ ಹರಪ್ರೀತ್ಸಿಂಗ್, ಕರಣ್ಪಾಲ್ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ಕುಮಾರ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಟೊರೊಂಟೊ ಮತ್ತು ಮಾಂಟ್ರಿಯಲ್ ಪ್ರದೇಶಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆನ್ನಲಾಗಿದೆ.
ಟೊರೊಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೃತ ವಿದ್ಯಾರ್ಥಿಗಳ ಕುರಿತು ಅವರ ಕುಟುಂಬಸ್ಥರಿಗೆ ಎಲ್ಲಾ ಮಾಹಿತಿ ರವಾನಿಸಿ ಸಹಕರಿಸುತ್ತಿದೆ. ಟೊರೊಂಟೊದಲ್ಲಿರುವ ಮೃತ ವಿದ್ಯಾರ್ಥಿಗಳ ಸ್ನೇಹಿತರ ಸಂಪರ್ಕದಲ್ಲಿದ್ದು ಎಲ್ಲಾ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಭಾರತೀಯ ರಾಯಭಾರಿ ಅಜಯ್ ಬಿಸಾರಿಯಾ ಟ್ವಿಟ್ ಮಾಡಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಸಂತಾಪ ಸೂಚಿಸಿ, ಮೃತ ವಿದ್ಯಾರ್ಥಿಗಳ ದೇಹಗಳನ್ನು ಭಾರತಕ್ಕೆ ತರಲು ಅವರ ಕುಟುಂಬಗಳಿಗೆ ಅಗತ್ಯ ಬೆಂಬಲ ನೀಡುವುದಾಗಿ ಟ್ವಿಟ್ನಲ್ಲಿ ತಿಳಿಸಿದ್ದಾರೆ.
Leave a Comment