ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಮನವಿಯ ಮೇರೆಗೆ ಬಾಷ್ ಲಿಮಿಟೆಡ್ ಬೆಂಗಳೂರು ಕಂಪನಿಯು ತಮ್ಮ ಸಿ.ಎಸ್.ಆರ್. ಅನುದಾನದ ಅಡಿಯಲ್ಲಿ ಮಂಚಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15.50 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ತರಗತಿ ಕೊಠಡಿಯನ್ನು ನಿರ್ಮಾಣ ಮಾಡಿದ್ದು.
ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬಾಷ್ ಲಿಮಿಟೆಡ್ ಕಂಪನಿಯ ಸಿ.ಎಸ್.ಆರ್ ಅನುದಾನಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಬಾಷ್ ಲಿಮಿಟೆಡ್ ಕಂಪನಿಯ ಮುಖ್ಯಸ್ಥರಾದ ಶ್ರೀ ಗಣೇಶ.ಬಿ, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಕಂಪ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ವಿನಾಯಕ ನಾಯ್ಕ, ಉಪಾಧ್ಯಕ್ಷರಾದ ರಂಜನಾ ಆಚಾರಿ, ಹಾಸಣಗಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ಪುರಂದರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್.ಆರ್.ಹೆಗಡೆ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀ ರಾಜು ನಾಯ್ಕ ಹಾಗೂ ಶಿಕ್ಷಕರು, ಗ್ರಾಮ ಪಂಚಾಯತ ಸದಸ್ಯರು, ಸ್ಥಳೀಯ ಪ್ರಮುಖರು ಗ್ರಾಮಸ್ಥರು ಉಪಸ್ಥಿತರಿದ್ದರು.
Leave a Comment