ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪಾಲಕರು ಆರೋಪಿಸಿರುವ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಅಗರ ಗ್ರಾಮದ ಶ್ಯಾಮಲಾ ಮತ್ತು ಮಂಜುನಾಥ್ ದಂಪತಿ ಮಗು ಮೃತಪಟ್ಟಿದೆ.
ಮಗು ಹುಟ್ಟಿದ ಬಳಿಕ ನಾಲ್ಕು ದಿನ ಚೆನ್ನಾಗಿತ್ತು, ಐದನೇ ದಿನ ಮಗುವಿಗೆ ಬ್ಲಡ್ ಇನ್ಫೆಕ್ಷನ್, ಜಾಂಡೀಸ್ ಆಗಿದೆ ಎಂಬ ರಿಪೋರ್ಟ್ ಬಂದಿದೆ. ನಂತರ ಪರೀಕ್ಷೆಗೆ ಒಳಪಡಿಸಿ ರಿಪೋರ್ಟ್ ಬಂದ ಒಂದು ದಿನವಾದರೂ ವೈದ್ಯರು ಚಿಕಿತ್ಸೆ ನೀಡಿಲ್ಲ, ಮೈಸೂರಿಗೂ ರೆಫರ್ ಮಾಡಿಲ್ಲ ವೈದ್ಯರು ಮತ್ತು ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆಂದು ಪಾಲಕ ಮಂಜುನಾಥ್ ದೂರಿದ್ದಾರೆ.
ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾದ ಮೇಲೆ ತಡವಾಗಿ ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ರಿಪೋರ್ಟ್ ಬಂದ ತಕ್ಷಣವೇ ಮೈಸೂರಿಗೆ ಕಳುಹಿಸಿದ್ದರೆ ಮಗು ಬದುಕುಳಿಯುತ್ತಿತ್ತು. ವೈದ್ಯರು ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ BMRCL New Recruitment 2023 Apply Online for Security officer post
- ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts
- KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today
- ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ
Leave a Comment