• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಮಾನವ ಕಳ್ಳಸಾಗಣೆ ಪತ್ತೆ: ಯುವತಿಯರನ್ನು ದುಬೈಗೆ ಕಳುಹಿಸುತ್ತಿದ್ದ ದಂಧೆ ಬಯಲು

April 12, 2022 by Deepika Leave a Comment

ಬೆಂಗಳೂರು : ಜ್ಯೂನಿಯರ್ ಆರ್ಟಿಸ್ಟ್‌ಗಳಾಗಿ ನಟಿಸಲು ಸಿದ್ಧರಿರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಹಣದ ಆಮಿಷವೊಡ್ಡಿ ವಿದೇಶಗಳಲ್ಲಿ‌ ಕೆಲಸ‌ ಕೊಡಿಸುವುದಾಗಿ ನಂಬಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಸುತ್ತಿದ್ದ ಮಾನವ‌ ಕಳ್ಳಸಾಗಾಣಿಕೆ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಜ್ಯೂನಿಯರ್ ಕಲಾವಿದರಾಗಿ ನಟಿಸುವ ಕರ್ನಾಟಕ, ತಮಿಳುನಾಡು, ಆಂಧ್ರ,‌ ಮಹಾರಾಷ್ಟ್ರ ಹಾಗೂ ಪಂಜಾಬ್ ಮೂಲದ ಯುವತಿಯರಿಗೆ ಗಾಳ ಹಾಕುತ್ತಿದ್ದ ಆರೋಪಿಗಳು ದುಬೈಗೆ ಹೋದರೆ ಲಕ್ಷ ಲಕ್ಷ ಹಣ ಸಂಪಾದಿಸಬಹುದು ಎಂದು ಪುಸಲಾಯಿಸುತ್ತಿದ್ದರಂತೆ. ಅಲ್ಲಿಯೂ ಕೂಡ ಡ್ಯಾನ್ಸ್, ಆಕ್ಟಿಂಗ್ ಕೆಲಸ ಇರುತ್ತೆ ಅಂತ ಹೇಳಿ ಯುವತಿಯರುಗೆ 50 ಸಾವಿರ ಅಡ್ವಾನ್ಸ್ ಕೊಟ್ಟು ವೀಸಾ, ಪಾಸ್‌ಪೋರ್ಟ್ ಮಾಡಿ ದುಬೈ ವಿಮಾನ ಹತ್ತಿಸುತ್ತಿದ್ದರು.

m

ಆರೋಪಿಗಳ ಪೈಕಿ ಇಬ್ಬರು ಕರ್ನಾಟಕದವರಾದರೆ, ಇನ್ನುಳಿದವರು ತಮಿಳುನಾಡು ಮೂಲದವರಾಗಿದ್ದಾರೆ. ಇವರು ಒಟ್ಟಾಗಿ ಈವೆಂಟ್ ಮ್ಯಾನೆಜ್ಮೆಂಟ್ ನಡೆಸುತ್ತಿದ್ದರು.

ಹಲವು ವರ್ಷಗಳಿಂದ ಈ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಕೊಪ್ಪಳ ಮೂಲದ ಪ್ರಮುಖ ಆರೋಪಿ ಬಸವರಾಜ ಶಂಕರಪ್ಪ, ಸಹಚರರಾದ ಆದರ್ಶ, ರಾಜೇಂದ್ರ ನಾಚಿಮುತ್ತು, ಮಾರಿಯಪ್ಪನ್, ಚಂದ್ರು, ಅಶೋಕ್ ಹಾಗೂ ರಾಜೀವ್ ಗಾಂಧಿಯನ್ನು ಬಂಧಿಸಿ 17 ಯುವತಿಯರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡಿದ್ದು, ವಿದೇಶಕ್ಕೆ ತೆರಳಲು ಸಿದ್ಧರಾಗಿದ್ದ ಅಮಾಯಕ‌ ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.

ದುಬೈನ ಡ್ಯಾನ್ಸ್ ಬಾರ್ ಮಾಲೀಕರ ಸಂಪರ್ಕ ಹೊಂದಿದ್ದ ಆರೋಪಿಗಳು ಅವರಿಂದಲೂ ಸಹ ಕಮಿಷನ್ ರೂಪದಲ್ಲಿ ಹಣ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.‌  

ಹೀಗೆ ಕನಸು ಕಟ್ಟಿಕೊಂಡು ದುಬೈನ ಎಂಟ್ರಿ ಆದ ಯುವತಿಯರಿಗೆ ಡ್ಯಾನ್ಸ್ ಬಾರ್‌ನಲ್ಲಿ ಡ್ಯಾನ್ಸ್, ಬಲವಂತವಾಗಿ ಅನೈತಿಕ ಚಟುವಟಿಕೆಗೂ ಬಳಸಿಕೊಳ್ಳುತ್ತಿದ್ದರು.

ಈ ಮಾಹಿತಿ ಅರಿತ ಸಿಸಿಬಿ‌ ಇನ್‌ಸ್ಪೆಕ್ಟರ್ ಹಜರೇಶ್ ನೇತೃತ್ವದ ತಂಡ ದುಬೈಗೆ ಶಿಫ್ಟ್ ಆಗಬೇಕಿದ್ದ 17 ಯುವತಿಯರನ್ನು ರಕ್ಷಿಸಿದ್ದಾರೆ ಎಂದು ಸಿಸಿಬಿ ಪೊಲೀಸ್ ಜಂಟಿ ಆಯುಕ್ತ ರಮಣ್ ಗುಪ್ತ ಮಾಹಿತಿ ನೀಡಿದರು. ಇದುವರೆಗೂ 95 ಯುವತಿಯರನ್ನು ದುಬೈಗೆ ಕಳುಹಿಸಿರುವ ಮಾಹಿತಿ ಲಭ್ಯವಾಗಿದೆ. ಇನ್ನೂ ಇಂತಹ ಜಾಲದಲ್ಲಿ ಯಾರಾದ್ರೂ ಸಿಲುಕಿಕೊಂಡಿದ್ರೆ ಸಿಸಿಬಿ ಮಾಹಿತಿ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ.

  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts
  • KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today
  • ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ
  • ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts
  • ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Crime, Karnataka News, Trending

Explore More:

About Deepika

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts

March 23, 2023 By Sachin Hegde

KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today

March 21, 2023 By Sachin Hegde

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 By Sachin Hegde

ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts

March 19, 2023 By Sachin Hegde

ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023

March 19, 2023 By Sachin Hegde

ಕರ್ನಾಟಕ ಅರಣ್ಯ ಇಲಾಖೆ ಆನೆ ಕವಾಡಿಗ ನೇಮಕಾತಿ 2023 KFD New recruitment 2023 – Apply for Ane Kavadiga posts

March 18, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...