ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಶೀಘ್ರವೇ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ರಾಜ್ಯ ಪೊಲೀಸ್ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಕೋರಮಂಗಲದ ಕೆಎಸ್ಆರ್ಪಿ ಮೂರನೇ ಬೆಟಾಲಿಯನ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆ ಕೆಲಸಗಳು ಶುರುವಾಗಿವೆ. ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧವಾಗಿವೆ. ಚುನಾವಣೆಗೆ ಹೆಚ್ಚು ಭದ್ರತೆ ಬೇಕಾಗುತ್ತದೆ. ಹಾಗಾಗಿ, ನಾವೂ ಕೂಡ ಸಿದ್ಧರಾಗಬೇಕಿದೆ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದ ಈಗಾಗಲೇ 4,000 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇಲಾಖೆಯಲ್ಲಿ ಇರುವ ಸಿಬ್ಬಂದಿಯೇ ಕಠಿಣ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆ, ಎಲೆಕ್ಷನ್, ಹಿಜಾಬ್ ವಿವಾದ ಸೇರಿದಂತೆ ಎಲ್ಲಾ ಕಠಿಣ ಸಮಯದಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಿದ್ದೀರಿ.ಚುನಾವಣೆ ಹಿನ್ನೆಲೆ ಕೆಎಸ್ಆರ್ಪಿ ಸಿಬ್ಬಂದಿ ಬೇರೆ ಬೇರೆ ರಾಜ್ಯಗಳಿಗೂ ಹೋಗಿ ಬಂದಿದ್ದೀರಿ. ಎಲ್ಲರಿಗೂ ವಂದನೆಗಳು. ಇದೇ ರೀತಿ ಮುಂದಿನ ವರ್ಷ ಕೂಡ ಸಿದ್ದರಾಗಿರಬೇಕು ಎಂದರು.
Leave a Comment