• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಇಲ್ಲಿನ ಪ್ರತಿಭೆಗಳಿಗೆ ನೆಲೆ ಕೊಡುವ ಕೆಲಸ ಆಗುತ್ತಿದೆ.

May 6, 2022 by Jayaraj Govi Leave a Comment

1651850395809 scaled

ಯಲ್ಲಾಪುರ: ಪ್ರತಿಭೆಗಳು ಬೆಳೆಯಲು ಉತ್ತಮ ಶಿಕ್ಷಣ ಅಗತ್ಯ ಎಂದು ಸೋಂದಾ ಶ್ರೀ ಸ್ವರ್ಣವಲ್ಲಿ ಸಂಸ್ಥಾನದ ಶ್ರೀಮದ್ ಗಂಗಾಧರೇAದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

1651850395838 scaled


ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶ್ರೀಮದ್ ಗಂಗಾಧರೇAದ್ರ ಸರಸ್ವತೀ ಸಭಾ ಭವನ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.
ನಮಗೆ ಬೇಕಾದ ಶಿಕ್ಷಣ ವ್ಯವಸ್ಥೆಯನ್ನು ಪಡೆದುಕೊಳ್ಳಲು ನಾವು ಕಷ್ಟಪಡಬೇಕಾಗಿ ಬಂದಿದೆ. ಸಾಕಷ್ಟು ಪ್ರತಿಭಾನ್ವಿತರಿರುವ ಉತ್ತರ ಕನ್ನಡದವರಿಗೆ ಉತ್ತಮ ಶಿಕ್ಷಣ ದೊರೆಯುತ್ತಿಲ್ಲ ಎಂಬ ಕೊರಗಿತ್ತು. ಆ ಕೊರಗು ಇದೀಗ ದೂರವಾಗಿದೆ. ಉತ್ತರ ಕನ್ನಡ ಜಿಲ್ಲೆಯವರಿಗೆ ಸೂಕ್ತ ತರಬೇತಿ ಅಗತ್ಯವಿದ್ದು, ಆ ತರಬೇತಿ ನೀಡಲು ವಿಶ್ವದರ್ಶನ ಸಂಸ್ಥೆ ಮುಂದಾಗಿರುವುದು ಸಂತಸದ ವಿಷಯ. ಎಲ್ಲರೂ ಸಂಸ್ಕೃತ ಭಾಷೆಯನ್ನು ಕೈಬಿಡುವ ಸಂದರ್ಭದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಸಂಸ್ಕೃತಕ್ಕೆ ಆದ್ಯತೆ ನೀಡಿ ಶಿಕ್ಷಣ ನೀಡುತ್ತಿದೆ. ಇಲ್ಲಿನ ಪ್ರತಿಭೆಗಳಿಗೆ ನೆಲೆ ಕೊಡುವ ಕೆಲಸ ಆಗುತ್ತಿದೆ. ಶೈಕ್ಷಣಿಕವಾಗಿ ಹೊಸ ಹೊಸ ವಿಚಾರಗಳನ್ನು ರೂಪಿಸಿ ಸಂಸ್ಥೆ ಮುನ್ನಡೆಯಲಿ ಎಂದು ಹಾರೈಸಿದರು.

1651850395867 scaled


ಸಭಾ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದ ಒಟ್ಟು ಬಜೇಟ್‌ನಲ್ಲಿ ೨೦ಸಾವಿರ ಕೋಟಿ ರೂ ಶಿಕ್ಷಣಕ್ಕೆ ಮೀಸಲಿದೆ. ಇಂದು ಮಕ್ಕಳಿಗೆ ಎಂತಹ ಶಿಕ್ಷಣ ಕೊಡಬೇಕು ಎಂಬ ಜಿಜ್ಞಾಸೆ ಎಲ್ಲರಿಗೂ ಕಾಡುತ್ತಿದೆ. ಸಂಸ್ಕಾರಯುತ ಶಿಕ್ಷಣದ ಕೊರತೆ ಎದ್ದು ತೋರುತ್ತಿದೆ ಎಂದರು. ಶಿವರಾಮ ಕಾರಂತರು ಹೇಳಿದಂತೆ, ಶಿಕ್ಷಣ ಅಂದರೆ ಶಾಲಾ ಕೊಠಡಿಯಿಂದ ಹೊರಗೂ ಯೋಜನೆ ರೂಪಿಸುವಂತಿರಬೇಕು. ಶಿಕ್ಷಣದ ಮೂಲಕ ಉತ್ತಮ ನಾಗರಿಕತ್ವ ಸೃಷ್ಠಿಯಾಗಬೇಕು ಎಂದರು.
ಜಿಲ್ಲಾಧಿಕಾರಿ ಮುಲೈ ಮುಹಿಲಿನ್ ಮಾತನಾಡಿ, ಅತ್ಯುತ್ತಮ ಶಿಕ್ಷಣಕ್ಕೆ ಹೆಸರಾದ ಉತ್ತರ ಕನ್ನಡದಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಇಲ್ಲದಿರುವುದು ವಿಷಾಧನೀಯ. ಉನ್ನತ ಶಿಕ್ಷಣಕ್ಕೆ ಇಲ್ಲಿನವರು ಬೇರೆಡೆ ತೆರಳುವುದು ತಪ್ಪಬೇಕು ಎಂದರು. ಸಂಸ್ಥೆ ಯ ಅಧ್ಯಕ್ಷ ಹರಿಪ್ರಕಾಶ ಕೋಣೆ ಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮೀಣಾಭಿವೃದ್ದಿ ಪಂಚಾಯತರಾಜ್ ಉಪ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀನಿವಾಸ ಹೆಬ್ಬಾರ್ ವೇದಿಕೆಯಲ್ಲಿದ್ದರು. ಸಂಸ್ಥೆಯ ವ್ಯವಸ್ಥಾಪಕ ಗುರುರಾಜ ಕುಂದಾಪುರ ಹಾಗೂ ವಿವಿಧ ಅಂಗಸAಸ್ಥೆಯ ಮುಖ್ಯಸ್ಥರು ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ಸ್ವಾಗತಿಸಿದರು. ಡಾ. ಡಿ ಕೆ ಗಾಂವ್ಕರ್ ನಿರ್ವಹಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant

March 24, 2023 By Sachin Hegde

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts

March 23, 2023 By Sachin Hegde

KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today

March 21, 2023 By Sachin Hegde

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 By Sachin Hegde

ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts

March 19, 2023 By Sachin Hegde

ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023

March 19, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...