ಹಳಿಯಾಳ : ಜೂನ್ 4, 2022 ರಂದು ಮೈಸೂರಿನಲ್ಲಿ, ಅಖಿಲ ಕರ್ನಾಟಕ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. 27 ಸದಸ್ಯ ಜಿಲ್ಲಾ ಸಂಸ್ಥೆಗಳು ಭಾಗವಹಿಸಿದ್ದ ಈ ಸಭೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕರಾಟೆ ಮಾಸ್ಟರ & ವಕೀಲರಾದ ಶಿಹಾನ್ ಮಂಜುನಾಥ ಮಾದಾರ ಇವರನ್ನು ಸಂಸ್ಥೆಯ ರಾಜ್ಯ ಕಾನೂನು ಸಲಹಾ ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
ಹಾಗೂ ಉತ್ತರ ಕನ್ನಡ ಜಿಲ್ಲಾ ಕರಾಟೆಗೆ ಪ್ರಧಾನ ಕಾರ್ಯದರ್ಶಿಯನ್ನಾಗಿ ಹಾಗೂ ಅರವಿಂದ ನಾಯ್ಕ ಕುಮಟಾ ಇವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ ನ ಅಧ್ಯಕ್ಷ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಮಾಚಯ್ಯ ಮತ್ತು ಪ್ರಧಾನ ಕಾರ್ಯದರ್ಶಿ ಭಾರ್ಗವ ರೆಡ್ಡಿ ಪ್ರಮಾಣ ಪತ್ರ ವಿತರಿಸಿ ಸನ್ಮಾನಿಸಿದರು.
Leave a Comment