ಲಖನೌ : ಉತ್ತರ ಪ್ರದೇಶ ರಾಜಧಾನಿ ಲಖನೌ ಮತ್ತು ಉನ್ನಾವೊದಲ್ಲಿರುವ ರಾಷ್ಟಿçÃಯ ಸ್ವಯಂಸೇವಕ ಕಚೇರಿಗಳನ್ನು ಸ್ಫೋಟಿಸುವುದಾಗಿ ವಾಟ್ಸಾಪ್ ನಲ್ಲಿ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆ ಆತಂಕಕ್ಕೆ ಎಡೆಮಾಡಿಕೊಟ್ಟಿದ್ದು, ಈ ಸಂಬAಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಎಫ್ ಐಆರ್ ದಾಖಲಿಸಿದ್ದಾರೆ.
ಲಖನೌ ಮತ್ತು ಉನ್ನಾವೊದಲ್ಲಿರುವ ಆರ್ ಎಸ್ ಎಸ್ ಕಚೇರಿಗಳಿಗೆ ಮುನ್ನೆಚ್ಚೆರಿಕೆ ಕ್ರಮವಾಗಿ ಭದ್ರತೆ ಒದಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಆರ್ ಎಸ್ ಎಸ್ ಕಚೇರಿಗಳನ್ನು ಸ್ಫೋಟಿಸುವು ದಾಗಿ ವಾಟ್ಸಾಪ್ ಸಂದೇಶ ರವಾನಿಸಲಾಗಿತ್ತು. ಇದು ಎಲ್ಲಿಂದ ಬಂದಿದೆ. ಯಾರು ಕಳುಹಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಸೈಬರ್ ಸೇಲ್ ಸಹಾಯದ ಮೂಲಕ ಸಂದೇಶ ಕಳುಹಿಸಿರುವ ಸಂಖ್ಯೆಯನ್ನು ಪತ್ತೆ ಮಾಡುವ ಕಾರ್ಯದಲ್ಲಿ ಪೊಲೀಸರು ಕರ್ಯೋ ನ್ಮುಖರಾಗಿದ್ದಾರೆ.
ಅಂತರಾಷ್ಟಿçÃಯ ಮೊಬೈಲ್ ನಂಬರ್ಗಳಿAದ ಸಂದೇಶಗಳನ್ನು ಆರ್ ಎಸ್ ಎಸ್ ಸದಸ್ಯ ನೀಲಕಂಠ ತಿವಾರಿ ಅವರಿಗೆ ಹಿಂದಿ, ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಕಳುಹಿಸಲಾಗಿತ್ತು. ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಗಂಭೀರವಾಗಿ ಪರಿಣಿಸಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ಕೈಗೊಂಡಿದ್ದಾರೆ.
Leave a Comment