ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮುಂಡಗೋಡ ತಾಲೂಕಿನ ಗುಂಜಾವತಿ (ಪವರ್ಗ2ಬಿ), ಯಲ್ಲಾಪುರ ತಾಲೂಕಿನ ಇಡಗುಂದಿ (ಸಾಮಾನ್ಯ ಮಹಿಳಾ ಅಭ್ಯರ್ಥಿ), ಕಾರವಾರ ತಾಲೂಕಿನ ಹೊಟೆಗಾಳಿ (ಪರಿಶಿಷ್ಟ ಜಾತಿ ಅಂಗವಿಕಲ ಅಭ್ಯರ್ಥಿ), ಹಳಿಯಾಳ ತಾಲೂಕಿನ ಸಾಂಬಾಣಿ (ಸಾಮಾನ್ಯ ಮಾಜಿ ಸೈನಿಕ), ಅಂಕೋಲಾ ತಾಲೂಕಿನ ಬೆಳಂಬಾರ (ಸಾಮಾನ್ಯ ಅಭ್ಯರ್ಥಿ) ಕಾರ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಕೊಳ್ಳಲಾಗುತ್ತಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು,
ಆಸಕ್ತ 18 ವರ್ಷಗಳು ಪೂರ್ಣಗೊಂಡಿರುವ ಸಾಮಾನ್ಯ-35, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ-40, ಪ್ರವರ್ಗ 2ಎ/2ಬಿ/3ಎ/3ಬಿ-38 ವರ್ಷಗಳು ಗರಿಷ್ಠ ವಯೋಮಿತಿ ಮೀರಿರದ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿರುವ ಅಭ್ಯರ್ಥಿಯಾಗಿರಬೇಕು. ನಿಗದಿತ ಮೀಸಲಾತಿಯ ಗ್ರಂಥಾಲಯ ವಿಜ್ಞಾನದ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಮುಂದುವರಿದ ಕಲಿಕಾ ಕೇಂದ್ರದಲ್ಲಿ ಪ್ರೇರಕ ಉಪಪ್ರೇರಕರಾಗಿ ಕೆಲಸ ನಿರ್ವಹಿಸಿದವರು ಮೇಲ್ವಿಚಾರಕ ಹುದ್ದೆಗೆ ನಿಗದಿಯಾದ ಮೀಸಲಾತಿ ಮತ್ತು ವಯೋಮಿತಿಯಲ್ಲಿದ್ದವರಿಗೆ ಆದ್ಯತೆ ನೀಡಲಾಗುವುದು.
ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅರ್ಜಿ ನಮೂನ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕಛೇರಿಗೆ ಆಗಸ್ಟ್ 5 ರೊಳಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ ದೂರವಾಣಿ ಸಂಖ್ಯೆ 08382-226564 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment