• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರಕೃತಿ ವಿಕೋಪ ಪರಿಹಾರ ನೀಡುವಲ್ಲಿ ಉ.ಕ ಜಿಲ್ಲೆಯನ್ನು ಕಡೆಗಣಿಸಿದ ಸರ್ಕಾರ ಕಾಟಾಚಾರದ ಸಭೆ ನಡೆಸಿದ ಕೋಟಾ ಶ್ರೀನಿವಾಸ ಪುಜಾರಿ-ತಾಹೀರ್ ಹುಸೇನ್ ಆರೋಪ

July 17, 2022 by bkl news Leave a Comment


ಭಟ್ಕಳ: ಉ.ಕ ಜಿಲ್ಲೆಯಲ್ಲಿ ಸತತವಾಗಿ ಕಳೆದ ೧೫ದಿನಗಳಿಂದ ಮಳೆ ಬೀಳುತ್ತಿದ್ದು ಜನರು ಭೀತಿಯಲ್ಲಿ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡದೆ ಮಳೆ ಪರಿಹಾರ ನೀಡುವಲ್ಲಿ ಉ.ಕ ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಧ್ಯಕ್ಷ ಅಡ್ವಕೇಟ್ ತಾಹೀರ್ ಹುಸೇನ್ ಆರೋಪಿಸಿದ್ದಾರೆ.

wp 1658038758161

ಅವರು ಶನಿವಾರ ಭಟ್ಕಳಹೊನ್ನಾವರ ವಿಧಾನಸಭಾ ಕ್ಷೇತ್ರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು.


ಮಳೆಯಿಂದಾಗಿ ಉ.ಕ ಜಿಲ್ಲೆಯಲ್ಲಿ ಅತ್ಯಂತ ಅನಾಹುತಗಳು ಸಂಭವಿಸಿದ್ದು ಸಾವಿರಾರು ಮಂದಿ ಸಂತೃಸ್ತರಾಗಿದ್ದಾರೆ. ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಿರಲಿ, ಚಂದಾವರ, ಅಳ್ವೆಕೋಡಿ ಮತ್ತಿತರ ಮಳೆ ಪ್ರಭಾವಿತ ಪ್ರದೇಶಗಳಿಗೆ ಭೇಟಿ ಸಂತೃತ್ತರೊAದಿಗೆ ಮಾತುಕತೆ ನಡೆಸಿದ ಅವರು, ಉ.ಕ. ಜಿಲ್ಲೆಯಲ್ಲಿ ೫ ಬಿಜೆಪಿಯ ಶಾಸಕರಿದ್ದರೂ ತಮ್ಮ ಮುಖ್ಯಮಂತ್ರಿಯನ್ನು ಜಿಲ್ಲೆಗೆ ಕರೆಸಿಕೊಳ್ಳಲು ವಿಫಲರಾಗಿದ್ದಾರೆ.

  • wp 1658038758134
  • wp 1658038758148
  • wp 1658038758104

ಅಲ್ಲದೇ ಶನಿವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪುಜಾರಿ ಕೇವಲ ಕಾಟಚಾರದ ಸಭೆ ನಡೆಸಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪ್ರಕೃತಿ ವಿಕೋಪದಿಂದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದ ಸಚಿವರು ಕೇವಲ ಅಧಿಕಾರಿಗಳಿಗೆ ಆದೇಶ ನೀಡಿದ್ದು ಅಮಾನವೀಯವಾಗಿದೆ. ಇದು ತೀರ ಖಂಡನೀಯವಾಗಿದೆ ಎಂದು ಅವರು ತಿಳಿಸಿದ್ದಾರೆ. ಗಂಜಿ ಕೇಂದ್ರ ತೆರೆಯುವ ವ್ಯವಸ್ಥೆಯೂ ಕೂಡ ಆಡಳಿತ ಮಾಡಿಲ್ಲ.

ಕೇವಲ ಕಾಟಾಚಾರಕ್ಕೆ ೨-೩ ಸಾವಿರ ರೂಪಾಯಿ ನೀಡಿದ್ದಾರೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಕೇವಲ ಎ.ಸಿ ರೂಮಿನಲ್ಲಿ ಕುಳಿತು ಸಭೆ ನಡೆಸಿದರೆ ಸಾಲದು ಜನರ ಕಷ್ಟನೋವು ತಿಳಿದುಕೊಳ್ಳಲು ಅವರ ಬಳಿ ಹೋಗಬೇಕು. ಸರ್ಕಾರ ಉ.ಕ ಜಿಲ್ಲೆಯ ಪೀಡಿತ ಜನರಿಗೆ ಕೂಡಲೇ ಸಮರ್ಪವಾದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಅಳ್ವೇಕೋಡಿಯ ಗುರುರಾಜ್ ಎಂಬುವವರು ನಾವು ಮಳೆಯಿಂದಾಗಿ ತುಂಬಾ ನಷ್ಟವನ್ನು ಅನುಭವಿಸಿದ್ದೇವೆ. ಇದುವರೆಗೂ ನಮಗೆ ಯಾವುದೇ ಪರಿಹಾರ ದೊರೆತಿಲ್ಲ. ಕೇವಲ ಬಂದುಹೋಗುವುದಷ್ಟೇ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಹಲವು ಮಹಿಳಯರು ಕೂಡ ತಮ್ಮ ನೋವುವನ್ನು ತೋಡಿಕೊಂಡಿದ್ದು ನಮಗೆ ಶಾಶ್ವತ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಮಧ್ಯಮ ಕಾರ್ಯದರ್ಶಿ ಅಝೀಝ್ ಜಾಗಿದಾರ್, ಉ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸೀಫ್ ಶೇಖ್ ಮತ್ತಿತರರು ಉಪಸ್ತಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ

September 23, 2023 By prakash naik

ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job

September 22, 2023 By prakash naik

DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ

September 18, 2023 By prakash naik

450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023

September 16, 2023 By prakash naik

ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ

September 16, 2023 By Sachin Hegde

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇರ ಸಂದರ್ಶನ 20-9-2023 DHFWS Haveri Recruitment

September 13, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...