• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ ಶೀಘ್ರ ಜಾರಿಗೊಳಿಸುವಂತೆ ಒತ್ತಾಯ

July 20, 2022 by Jayaraj Govi Leave a Comment

IMG 20220716 WA0168

ಯಲ್ಲಾಪುರ : ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ ಆಗಲೇ ಬಾರದೆಂದು ಹಠ ಹೊತ್ತಿರುವ ಕೆಲ ಢೋಂಗಿ ಪರಿಸರವಾದಿಗಳು, ಸರ್ಕಾರ ಎಂದೆಲ್ಲಾ ಯೋಜನೆಯ ಕುರಿತು ಮಾತನಾಡುತ್ತದೆಯೋ, ಆಗ ಮಾತ್ರ ಅವರ ಪರಿಸರ ಪ್ರೇಮ ಜಾಗೃತವಾಗಿ ಮಳೆಗಾಲದಲ್ಲಿ ಮೇಲೇಳುವ ಉಂಬಳಗಳಂತೆ ವರ್ತಿಸುತ್ತಾರೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಆರೋಪಿಸಿದ್ದಾರೆ.


ಪಟ್ಟಣದ ಸಾಹಿತ್ಯ ಭವನದಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, 16 ವರ್ಷಗಳ ಹಿಂದೆ ಪರಿಸರವಾದಿಗಳೆಂದು ಕರೆಯಿಸಿಕೊಳ್ಳುವವರ ಕಾರಣದಿಂದಾಗಿ ನೆನೆಗುದಿಗೆ ಬಿದ್ದಿರುವ ಅಂಕೋಲಾ-ಹುಬ್ಬಳ್ಳಿ ರೈಲ್ವೇ ಯೋಜನೆಯು ಮತ್ತೆ ಆರಂಭವಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಈ ಕುರಿತು ಸರ್ಕಾರದ ಮೇಲೆ ಎಲ್ಲ ರೀತಿಯ ಒತ್ತಡ ಹಾಗೂ ಕಾನೂನಿನ ಮೊರೆ ಹೋಗಲಾಗುತ್ತಿದೆ. ಆದರೂ ಸಹ ಪರಿಸರದ ಹೆಸರಿನಲ್ಲಿ ಯೋಜನೆ ಜಾರಿಗೆ ತರುವಲ್ಲಿ ಸಫಲರಾಗುತ್ತಿಲ್ಲ.


ಇವರು ನಿಜವಾಗಲೂ ಪರಿಸರ ಪ್ರೇಮಿಗಳೇ ಆಗಿದ್ದಲ್ಲಿ, ಇಂತಹ ಕಳ್ಳಾಟ ಮಾಡುವ ಬದಲು ಕಳೆದ 16 ವರ್ಷಗಳಲ್ಲಿ ಒಂದು ಬಾರಿಯಾದರೂ ಜನರನ್ನು ಸೇರಿಸಿ, ಮುಖಾಮುಖಿ ಚರ್ಚಿಸಿ ಯೋಜನೆಯ ಸಾಧಕ ಬಾಧಕಗಳನ್ನು ಮನದಟ್ಟು ಮಾಡಿಸುತ್ತಿದ್ದರು. ಈ ರೀತಿ ಕದ್ದು ಮುಚ್ಚಿ ಕಾನೂನು ಮರೆ ಹೋಗುವ ಅವಶ್ಯಕತೆ ಇರಲಿಲ್ಲ.
ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ, ತಾಳಗುಪ್ಪ-ಖಾನಾಪುರ ಹಾಗೂ ಕೈಗಾ ಬಂಕಾಪುರ ರಾಜ್ಯ ಹೆದ್ದಾರಿ ಮೇಲ್ದರ್ಜೆ, ಶಿರಸಿ-ತಾಳಗುಪ್ಪ ರೈಲ್ವೆ ಯೋಜನೆಯ ಚರ್ಚೆ ಸೇರಿದಂತೆ ಜಿಲ್ಲೆಯಲ್ಲಿ ಮಾಡಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳು ಪರಿಸರಕ್ಕೆ ಯಾವುದೇ ಹಾನಿ ಮಾಡುವುದಿಲ್ಲವಾದರೆ ಉತ್ತರ ಕರ್ನಾಟಕ ಹಾಗೂ ಕರಾವಳಿಯನ್ನು ಬೆಸೆಯುವ ಕೊಂಡಿಯಾಗಿರುವ ಅಂಕೋಲಾ ಹುಬ್ಬಳ್ಳಿ ರೈಲ್ವೆ ಯೋಜನೆ ಮಾತ್ರ ಹೇಗೆ ಪರಿಸರ ನಾಶ ಮಾಡುತ್ತದೆ ಎಂಬುದು ನಮ್ಮ ಪ್ರಶ್ನೆಯಾಗಿದೆ.


ಇದು ಕೇವಲ ಸಾರ್ವಜನಿಕ ಸಂಚಾರ ಅಥವಾ ವಾಣಿಜ್ಯ ಉಪಯೋಗಕ್ಕೆ ಸೀಮಿತವಾಗಿಲ್ಲದೆ ಕೈಗಾ ಸೀಬರ್ಡ್ ಬಂದರು ಇತ್ಯಾದಿ ರಾಷ್ಟ್ರೀಯ ಯೋಜನೆಗಳಿಗೆ ಪೂರಕವಾಗಿ ಹಾಗೂ ದೇಶದ ರಕ್ಷಣಾ ವಲಯದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. ಇಲ್ಲಿಯವರೆಗೆ ಸರ್ಕಾರಕ್ಕೆ ಅಥವಾ ಅಧಿಕಾರಿಗಳಿಗೆ ಬೇಕಾದ ಯೋಜನೆಗಳು ಎಷ್ಟೇ ತಕರಾರಿದ್ದರು ಜಾರಿಗೆ ಬರುತ್ತಿವೆ. ಆದರೆ ಜನ ಸಾಮಾನ್ಯರಿಗೆ ಬೇಕಾದ ಯಾವುದೇ ಯೋಜನೆ ಬಂದರು, ನೂರೆಂಟು ವಿಘ್ನಗಳು ಎದುರಾಗುತ್ತಿವೆ. ಎಲ್ಲವನ್ನು ಹೋರಾಟದ ಮೂಲಕವೇ ಪಡೆಯಬೇಕಾದ ವಿಪರ್ಯಾಸ ಉಂಟಾಗಿದೆ ಎಂದು ತಿಳಿಸಿದರು.


ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ ಮಾತನಾಡಿ, ಈ ರೈಲ್ವೆ ಯೋಜನೆಯು ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿದೆ. ಅಂಕೋಲಾದಲ್ಲಿ ನಿರ್ಮಿಸಲಾಗುವ ವಿಮಾನ ನಿಲ್ದಾಣಕ್ಕೂ ಸಂಪರ್ಕಿಸಲು ಸಹಾಯಕವಾಗಲಿದೆ. ಅಭಿವೃದ್ಧಿಯ ದೃಷ್ಟಿಯಿಂದ ಆದಷ್ಟು ಬೇಗ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಲೆನಾಡು ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್.‌ ಹೆಗಡೆ ಕುಂಬ್ರಿಗುಡ್ಡೆ, ಜಿಲ್ಲಾ ಆಟೋ ಚಾಲಕರ ಸಂಘದ ಸಂತೋಷ ನಾಯ್ಕ, ವಿನೋದ ತಳೇಕರ್‌, ಮಾಧವ ನಾಯಕ ಇದ್ದರು.

ಯಲ್ಲಾಪುರ ದಲ್ಲಿ ಅಗಷ್ಟ 13 ರಂದು ರಾಷ್ಟ್ರೀಯ ಲೋಕ ಅದಾಲತ್‌

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...