• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಧಾರವಾಡದ ರಂಗಾಯಣದಲ್ಲಿ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ

July 21, 2022 by Deepika Leave a Comment

ಕಾರವಾರ- ಧಾರವಾಡ ರಂಗಾಯಣ ಸಭಾಭವನದಲ್ಲಿ ಜಿಲ್ಲೆಯ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಬುದವಾರ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

WhatsApp Image 2022 07 20 at 11.46.42 PM


ಹುಬ್ಬಳ್ಳಿಯಿಂದ ಪ್ರಕಟಗೊಳ್ಳುವ ಪ್ರತಿಷ್ಠಿತ ವಿಶ್ವ ದರ್ಶನ ಪತ್ರಿಕೆ ಸಾರತ್ಯದಲ್ಲಿ ಬುಧವಾರ ಧಾರವಾಡ ರಂಗಾಯಣ ಸಭಾಭವನದಲ್ಲಿ ಸಾಹಿತ್ಯ, ಸಂಗೀತ, ಕಲೆ, ಪತ್ರಿಕೋಧ್ಯಮ, ರಂಗಭೂಮಿ, ಜಾನಪದ ಹೀಗೆ ವಿವಿದ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯಿಂದ ಸುಮಾರು ಹದಿನೆಂಟು ವರ್ಷಕ್ಕೂ ಹೆಚ್ಚುಕಾಲ ಸಾಹಿತ್ಯ ಸಂಗೀತ ಸಂಘಟನೆ ಪ್ರಕಾಶನ ಹೀಗೆ ಹಲವು ರಂಗಗಳಲ್ಲಿ ತಮ್ಮನ್ನು ಸದಾ ತೊಡಗಿಸಿಕೊಂಡು ಜಿಲ್ಲೆಯ ಭಾವಕವಿ ಎಂದೇ ಹೆಸರಾದ ಉಮೇಶ ಮುಂಡಳ್ಳಿಯವರನ್ನು ಸಾಹಿತ್ಯ ರಂಗದ ಸೇವೆಗಾಗಿ ಗುರುತಿಸಿ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.

ವಿಶ್ವ ದರ್ಶನ ಪತ್ರಿಕೆಯ ಪರವಾಗಿ ಪ್ರಧಾನ ಸಂಪಾದಕ ಡಾ.ಎಸ್ ಎಸ್ ಪಾಟೀಲ್ ಹಾಗೂ ಗಜೇಂದ್ರಗಡದ ಕಾಲ ಜ್ಞಾನ ಮಠದ ಡಾ.ಶ್ರೀ ಕಾಲಜ್ಞಾನ ಬ್ರಹ್ಮ ಸದ್ಗುರು ಶರಣಬಸವ ಮಹಾಸ್ವಾಮಿಗಳು ಮುಂಡಳ್ಳಿ ಯವರಿಗೆ ಸಾಲು ಹೊದಿಸಿ ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಕಾಲ ಜ್ಞಾನ ಮಠದ ಸ್ವಾಮಿಜಿಯವರು ಪ್ರಶಸ್ತಿ ಹಿರಿಮೆಯನ್ನು ಶ್ರೇಷ್ಠತೆಯನ್ನು ತಂದುಕೊಡುವ ಜೊತೆಗೆ ಸಮಾಜದಲ್ಲಿ ನಮ್ಮ ಗುರುತರವಾದ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ.ವೈಯಕ್ತಿವಾಗಿ ಮಾತ್ರವಲ್ಲದೆ ನಾವು ಸಮಾಜದ ಸ್ವತ್ತಾಗಿ ಪರಿವರ್ತನೆಯಾಗುತ್ತೇವೆ ಎಂದರು.


ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಧಾರವಾಡ ಮುರುಘಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಬಾದಾಮಿಯ ಸಿದ್ದಾರೂಡಮಠದ ಶ್ರೀ ಶ್ರೀ ವೀರಯ್ಯ ಮಹಾಸ್ವಾಮಿಗಳು, ಹುಬ್ಬಳ್ಳಿಯ ಹಾಲಯ್ಯ ಮಠದ ಶ್ರೀ ಶ್ರೀ ಹಾಲಯ್ಯ ಮಹಾಸ್ವಾಮಿಗಳು ಹಿತವಚನ ನುಡಿದರು.


ವಿಶ್ವದರ್ಶನ ಪತ್ರಿಕೆಯ ಸಂಪಾದಕ ಡಾ.ಎಸ್.ಎಸ್.ಪಾಟಿಲ್ ಮಾತನಾಡಿ ಸರ್ಕಾರದ ಯಾವ ನೆರವಿಲ್ಲದಿದ್ದರೂ ಸಮಾಜದ ಪ್ರತಿಭಾನ್ವಿತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯದಲ್ಲಿ ತಮಗೆ ಹೆಚ್ಚಿನ ತೃಪ್ತಿ ಇರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.


ವೇದಿಕೆಯಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ ಇದರ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ಬಸವಲಿಂಗಪ್ಪ ಬ ವಣ್ಣರ್ ರಾಷ್ಟ್ರೀಯ ನಿವೃತ್ತ ಸೈನಿಕ ಸಂಘದ ಅಧ್ಯಕ್ಷರು ಮೊದಲಾದ ಗಣ್ಯರು ಉಪಸ್ಥಿತರಿದ್ದು ಮಾತನಾಡಿದರು.
ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅನೇಕ ಜಾನಪದ ಕಲೆಗಳು ಪ್ರದರ್ಶಿಸಲ್ಪಟ್ಟವು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karwar News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...