• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK
      • Notification

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 900ಕ್ಕೂ ಅಧಿಕ ಪಡಿತರ ಅಕ್ಕಿ ಪತ್ತೆ

July 23, 2022 by bkl news Leave a Comment

ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಸಲಗದ್ದೆಯ ನಿರ್ಜನ ಪ್ರದೇಶದಲ್ಲಿನ ಪಾಳು ಬಿದ್ದ ಕ್ಯಾಶ್ಯು ಗೋದಾಮಿನಲ್ಲಿ ಅಕ್ರಮವಾಗಿ 900ಕ್ಕೂ ಅಧಿಕ ಪಡಿತರ ಅಕ್ಕಿಯ ಚೀಲವು ಪತ್ತೆಯಾಗಿದ್ದು, ಸ್ಥಳಕ್ಕೆ ತಹಸೀಲ್ದಾರ ಹಾಗೂ ಸಿಪಿಐ ಮತ್ತು ಪೋಲಿಸ್ ಸಿಬ್ಬಂದಿಗಳು ದಾಳಿ ನಡೆಸಿ ವಶಕ್ಕೆ ಪಡೆಯಲಾದ ಘಟನೆಯು ಶುಕ್ರವಾರದಂದು ಸಂಜೆ ವರದಿಯಾಗಿದೆ.

WhatsApp Image 2022 07 22 at 10.54.22 PM

ಸಾರ್ವಜನಿಕರ ದೂರಿನ್ವಯದಂತೆ ಭಟ್ಕಳ ತಹಸೀಲ್ದಾರ ಡಾ. ಸುಮಂತ ಹಾಗೂ ನಗರ ಠಾಣೆ ಸಿಪಿಐ ದಿವಾಕರ ಹಾಗೂ ಗ್ರಾಮೀಣ ಠಾಣೆ ಸಿಪಿಐ ಮಹಾಬಲೇಶ್ವರ ನಾಯ್ಕ ಅವರ ನೇತೃತ್ವದಲ್ಲಿ ಅಕ್ರಮ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟ ಗೋದಾಮ ಮೇಲೆ ದಾಳಿ‌ ನಡೆಸಲಾಗಿದೆ. ಅಕ್ರಮ ಅಕ್ಕಿಯನ್ನು ತಾಲೂಕಿನ ನಾನಾ ಕಡೆಗಳಿಂದ ಜನರಿಂದ ಪಡೆದು ಸಂಗ್ರಹಿಸಿ ಕಡಸಲಗದ್ದೆಯಲ್ಲಿನ ನಿರ್ಜನ ಪ್ರದೇಶದ ಹಳೆಯ ಕ್ಯಾಶ್ಯು ಗೋದಾಮಿನಲ್ಲಿ ಸಂಗ್ರಹಿಸಿಡಲಾಗುತ್ತಿತ್ತು ಎಂಬ ಮಾಹಿತಿ ತಿಳಿದು ಬಂದಿದೆ.


ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಪೋಲೀಸರು ಗೋದಾಮು ಒಳಗೆ ಪರಿಶೀಲಿಸಿದಾಗ ಒಂದು ಸಲಕ್ಕೆ ಹೌಹಾರಿದ್ದಾರೆ.

WhatsApp Image 2022 07 22 at 10.54.22 PM 1


ಗೋದಾಮಿನೊಳಗೆ ಅಂದಾಜು 900ಕ್ಕೂ ಅಧಿಕ ಚೀಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕ್ವಿಂಟಾಲ್ ಅಕ್ಕಿಯನ್ನು ಸಂಗ್ರಹಿಸಿಡಲಾಗಿದೆ ಎನ್ನುವ ಮಾಹಿತಿ ಮೇಲ್ನೋಟಕ್ಕೆ ತಿಳಿದು ಬಂದಿದೆ.

ಗೋದಾಮಿನಲ್ಲಿ ನಾನಾ ಕಡೆಯಿಂದ ಸಂಗ್ರಹಿಸಿದ ಅಕ್ಕಿಯನ್ನು ಸಿಮೆಂಟ್ ಚೀಲದಲ್ಲಿ ತುಂಬಿಸಿ ಯಂತ್ರದಿಂದ ಚೀಲವನ್ನು ಹೊಲಿಗೆ ಮಾಡಿರುವುದು ಕಂಡು ಬಂದಿದೆ. ಹಾಗೂ ಸಾಕಷ್ಟು ಗೋಣಿ ಚೀಲಗಳನ್ನು ಸಹ ಸಂಗ್ರಹಿಸಿಟ್ಟಿರುವುದು ಕಂಡು ಬಂದಿದೆ.

ಸದ್ಯ ಗೋದಾಮು ಸಹಿತ 900ಕ್ಕೂ ಅಧಿಕ ಅಕ್ಕಿ ಚೀಲ ಹಾಗೂ ಚೀಲ ಹೊಲಿಯುವ ಯಂತ್ರವನ್ನು ಜಪ್ತಿ ಮಾಡಲಾಗಿದೆ.

ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಇರುವ ಹಿನ್ನೆಲೆಯಲ್ಲಿ ಅಕ್ಕಿಯನ್ನು ಸರಕಾರಿ ಗೋದಾಮಿಗೆ ಸಾಗಾಟ ಮಾಡಲು ಸಾಧ್ಯವಾಗದ ಹಿನ್ನೆಲೆ ಸದ್ಯಕ್ಕೆ ಗೋದಾಮು ಜಪ್ತಿ ಮಾಡಲಾಗಿತ್ತಾದರು ಸಹ ರಾತ್ರಿ ಮುಂಜಾನೆಯ ತನಕ ಡಿಆರ್ ಪೋಲಿಸ ಸಿಬ್ಬಂದಿಗಳು ಹಾಗೂ ಗ್ರಾಮ ಸಹಾಯಕರು ಕಾವಲು‌ ಕಾದಿದ್ದಾರೆ.

ಅಕ್ರಮ ಅಕ್ಕಿ ಸಂಗ್ರಹಿಸಿಟ್ಟ ಆರೋಪಿಗಳು ಮಾಹಿತಿ ತಿಳಿದು ಸ್ಥಳದಿಂದ ನಾಪತ್ತೆಯಾಗಿದ್ದು, ಪತ್ತೆಗೆ ಶೋಧ ಕಾರ್ಯ ಇನ್ನಷ್ಟೇ ನಡೆಯಬೇಕಾಗಿದೆ.

ಸ್ಥಳದಲ್ಲಿ ಆಹಾರ ನಿರೀಕ್ಷಕ ಪಾಂಡು ನಾಯ್ಕ, ಕಂದಾಯ ನಿರೀಕ್ಷಕ ವಿಶ್ವನಾಥ ಗಾಂವಕರ್, ಗ್ರಾಮೀಣ ಠಾಣೆ ಪಿಎಸ್ಐ ಭರತಕುಮಾರ, ನಗರ ಠಾಣೆ ಪಿಎಸ್ಐಗಳಾದ ಸುಮಾ ಬಿ., ಹೆಚ್ ಕುಡಗುಂಟಿ ಹಾಗೂ ಸಿಬ್ಬಂದಿಗಳು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About bkl news

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ವೈಜ್ಞಾನಿಕ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

June 4, 2023 By Sachin Hegde

ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

June 4, 2023 By Sachin Hegde

ವಿವಿಧ ಹುದ್ದೆಗಳಿಗೆ ನೇಮಕಾತಿ 

June 4, 2023 By Sachin Hegde

KRIDE ನೇಮಕಾತಿ 2023

June 2, 2023 By Sachin Hegde

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ2023 SBI New Recruitment 2023

May 30, 2023 By Sachin Hegde

 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ MRPL Recruitment 2023 

May 29, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...