• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಳಚೆ ಗ್ರಾಮಕ್ಕೆ ಸ್ವರ್ಣವಲ್ಲೀ ಮಠದ ನಿಯೋಗ ಭೇಟಿ

July 30, 2022 by Jayaraj Govi Leave a Comment

IMG 20220728 185634


ಯಲ್ಲಾಪುರ : ತಾಲೂಕಿನ ಕಳಚೆ ಗ್ರಾಮಕ್ಕೆ ಸ್ವರ್ಣವಲ್ಲೀ ಮಠದ ನಿಯೋಗ ಭೇಟಿನೀಡಿ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿಕಳಚೆಯ ಭೂ ಕುಸಿತ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಹೋರಾಟದ ಸಮಿತಿಯ ಸಭೆಯನ್ನು ನಡೆಸಿದರು.

ಗ್ರಾಮಸ್ಥರಿಗೆ ವ್ಯವಸ್ಥಿತವಾದ ಪುನರ್ವಸತಿ ಕಲ್ಪಿಸಿ ಸ್ಥಳಾಂತರಿಸಲು ಒಮ್ಮತದ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಕಳೆದ ವರ್ಷದ ಭೂ ಕುಸಿತದಿಂದ ಸಂಪೂರ್ಣ ಹಾಗೂ ಭಾಗಶಃ ಮನೆ ಕಳೆದುಕೊಂಡವರಿಗೆ ಸರ್ಕಾರ ಘೋಷಿಸಿದ ಪರಿಹಾರ ಶೀಘ್ರ ಬಿಡುಗಡೆ ಆಗಬೇಕು. ಈವರೆಗೆ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ ಕೇವಲ 95,000 ರೂ. ಬಿಡುಗಡೆ ಆಗಿದೆ. ಯಾವುದೇ ಸಮಯದಲ್ಲಿ ಭೂಕುಸಿತ ಉಂಟಾಗುವ ಭೀತಿ ಇರುವ ಹಿನ್ನೆಲೆಯಲ್ಲಿ ಎಲ್ಲಿ ಮನೆ ನಿರ್ಮಾಣ ಮಾಡಬೇಕು ಎನ್ನುವ ಗೊಂದಲದಲ್ಲಿ ಇದ್ದಾರೆ. ಶೀಘ್ರ ಉಳಿದ ಮೊತ್ತ ಬಿಡುಗಡೆ ಆಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಭೂಕುಸಿತದಲ್ಲಿ ನಷ್ಟವಾದ 12 ಕಾಲುಸಂಕಗಳು, 13 ಬಾಂದಾರಗಳ ಮರು ರ್ನಿಮರ್ಾಣ ಆಗಿಲ್ಲ. ಭೂಕುಸಿತದಿಂದ ತೊಂದರೆಗೆ ಒಳಗಾದರೂ ಪ್ರಸ್ತುತ ಅನಿವಾರ್ಯವಾಗಿ ಅದೇ ಸ್ಥಳದಲ್ಲಿ ಮುಂದುವರಿಯುತ್ತಿರುವವರಿಗೆ ಕುಡಿಯುವ ನೀರು, ಕಾಲು ಸಂಕ, ಬಾಂದಾರ, ರಸ್ತೆ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಗ್ರಾಮಸ್ಥರಾದ ಆರ್. ಪಿ. ಹೆಗಡೆ, ಗಜಾನನ ಭಟ್ಟ, ವೆಂಕಟ್ರಮಣ ಬೆಳ್ಳಿ, ಗೋಪಾಲ ಭಟ್ಟ, ಉಮೇಶ ಭಾಗ್ವತ ಇತರರು ಆಗ್ರಹಿಸಿದರು.

ಸಂತ್ರಸ್ತರು ತಮ್ಮ ಅದಾಯದ ಮೂಲವಾದ ಜಮೀನುಗಳನ್ನು ಕಳೆದುಕೊಂಡಿ ರುವುದರಿಂದ ಅವರು ಸಹಕಾರಿ ಸಂಘ ಹಾಗೂ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ಮನ್ನಾ ಮಾಡಬೇಕು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ತಾಲೂಕು ಮಾರ್ಕೆಟಿಂಗ್ ಸೊಸೈಟಿ, ಪಿ.ಎಲ್.ಡಿ.ಬ್ಯಾಂಕ್ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದ ಸಾಲದ ವಿವರಗಳನ್ನು ಪಡೆದು ಈ ಬಗ್ಗೆ ಸರ್ಕಾರದಿಂದ ಸಾಲಮನ್ನಾ ಸೌಲಭ್ಯದ ನೆರವನ್ನು ಕೋರಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಸ್ವರ್ಣವಲ್ಲೀ ನಿಯೋಗದ ಅನಂತ ಹೆಗಡೆ ಅಶೀಸರ ಮಾತನಾಡಿ, ಕಳಚೆಯವರಿಗೆ ದುರಂತ ನಡೆದು ಒಂದು ವರ್ಷ ಕಳೆದರೂ ಈವರೆಗೂ ಪರಿಹಾರ ದೊರಕದೇ ಇರುವ ಕುರಿತು ಶ್ರೀಗಳು ವಿಧಾನಸಭಾಧ್ಯಕ್ಷರಿಗೆ ಕರೆ ಮಾಡಿ, ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಠದ ಅಧ್ಯಕ್ಷ ವಿಶ್ಲೇಶ್ವರ ಹೆಗಡೆ ಬೊಮ್ಮನಹಳ್ಳಿ, ಶ್ರೀಗಳ ಮಾರ್ಗದರ್ಶನದಲ್ಲಿ ಕಳಚೆಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವದಾಗಿ ತಿಳಿಸಿದರು.

ನಿಯೋಗದ ಪ್ರಮುಖ ನಾರಾಯಣ ಹೆಗಡೆ ಗಡಿಕೈ ಸಭೆಯ ನಿರ್ಣಯಗಳನ್ನು ವಾಚಿಸಿದರು. ಹೋರಾಟ ಸಮಿತಿ ಪ್ರಮುಖರಾದ ಅನಂತ ಹೆಗಡೆ, ರಾಮಚಂದ್ರ ಭಟ್ಟ, ರಾಮಚಂದ್ರ ಹೆಗಡೆ, ಗಣಪತಿ ಹೆಗಡೆ, ರಾಘವೇಂದ್ರ ಭಟ್ಟ, ಕಾಶೀನಾಥ ಕಳಸ, ವಿಶ್ವೇಶ್ವರ ಭಟ್ಟ, ಜನಾರ್ದನ ಹೆಬ್ಬಾರ ಮುಂತಾದವರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...