ಭಟ್ಕಳ: ಶನಿವಾರ ರಾತ್ರಿ ತಾಲೂಕಿನ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ ಎಂಟು ವರ್ಷದ ಬಾಲಕ ಗೋವಾ ಕ್ಯಾಲಂಗುಟ್ ಬೀಚ್ ನಲ್ಲಿ ಪತ್ತೆಯಾದ್ದಾನೆ
ಅಪಹರಣಕ್ಕೆ ಒಳಗಾದ ಬಾಲಕನನ್ನು ನಿನ್ನೆ ರಾತ್ರಿ ಸಿ.ಪಿ.ಐ ದಿವಾಕರ ನೇತೃತ್ವದಲ್ಲಿ ಬಾಲಕನನ್ನು ಅಪಹರಣಕಾರರಿಂದ ರಕ್ಷಣೆ ಮಾಡಿ ಭಟ್ಕಳಕ್ಕೆ ಕರೆ ತರಲಾಗಿದೆ. ಹಾಗೂ ಬಾಲಕನನ್ನು ಅಪಹರಣ ಮಾಡಿದ ಇಬ್ಬರು ಆರೋಪಿಯನ್ನು ಬಂಧಿಸಲಾಗಿದೆ.
ಇಬ್ಬರು ಆರೋಪಿಗಳನ್ನು ಬಾಲಕನ ಸಂಬಂಧಿಕರೆಂದು ಮಾಹಿತಿ ತಿಳಿದು ಬಂದಿದೆ. ಬಾಲಕನ ಅಪಹರಣಕ್ಕೆ ಕಾರಣ ಇನ್ನೇನು ಪೊಲೀಸ ತನಿಖೆಯಿಂದ ತಿಳಿದು ಬರಬೇಕಿದೆ.
ಇದೆ ವೇಗದಲ್ಲಿ ಕಾರ್ಯಾಚರಣೆ ಮಾಡಿದ ಭಟ್ಕಳ ಪೊಲೀಸರ ಬಗ್ಗೆ ಸಾರ್ವಜನಿಕ ವಲಯದಲ್ಲಿ
ಮೆಚ್ಚುಗೆ ವ್ಯಕ್ತವಾಗಿದೆ.
Leave a Comment